'ಇವತ್ತು ಇವಳು, ನಾಳೆ ಅವಳು'; ನಟ ದರ್ಶನ್ ವಿರುದ್ಧ ಸಿಡಿದೆದ್ದ ಗೌಡತಿಯರ ಸೇನೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಒಂದಿಲ್ಲೊಂದು ವಿವಾದಗಳು ಸುತ್ತಿಕೊಳ್ಳುತ್ತಲೇ ಇವೆ. ನಿರ್ಮಾಪಕ ಉಮಾಪತಿ ಗೌಡ ಹಾಗೂ ದರ್ಶನ್ ನಡುವಿನ ಕಾಟೇರ ಚಿತ್ರದ ಟೈಟಲ್ ಜಟಾಪಟಿ ನಡುವೆ ಇದೀಗ ದರ್ಶನ್ ವಿರುದ್ಧ ಗೌಡತಿಯರ ಸೇನೆ ಸಿಡಿದೆದ್ದಿದೆ.
ದರ್ಶನ್
ದರ್ಶನ್
Updated on

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಒಂದಿಲ್ಲೊಂದು ವಿವಾದಗಳು ಸುತ್ತಿಕೊಳ್ಳುತ್ತಲೇ ಇವೆ. ನಿರ್ಮಾಪಕ ಉಮಾಪತಿ ಗೌಡ ಹಾಗೂ ದರ್ಶನ್ ನಡುವಿನ ಕಾಟೇರ ಚಿತ್ರದ ಟೈಟಲ್ ಜಟಾಪಟಿ ನಡುವೆ ಇದೀಗ ದರ್ಶನ್ ವಿರುದ್ಧ ಗೌಡತಿಯರ ಸೇನೆ ಸಿಡಿದೆದ್ದಿದೆ.

ದರ್ಶನ್ ರ 25 ವರ್ಷದ ಸಿನಿ ಪಯಣದ ಕುರಿತಂತೆ ನಡೆದ ಬೆಳ್ಳಿ ಪರ್ವ ಡಿ-25 ಸಮಾರಂಭದಲ್ಲಿ ನಟ ದರ್ಶನ್ ವೇದಿಕೆ ಮೇಲೆ ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಇವತ್ತು ಇವಳು, ನಾಳೆ ಅವಳು ಎಂದು ಹೇಳಿದ್ದ ದರ್ಶನ್ ವಿರುದ್ಧ ಗೌಡತಿಯರ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ದರ್ಶನ್ ಅವರು ಈ ರೀತಿ ಉಡಾಫೆ ಆಗಿ ಮಾತನಾಡುವ ಅವಶ್ಯಕತೆ ಏನಿತ್ತು? ಈ ರೀತಿ ಮಾತುಗಳನ್ನು ನಾವು ಏಕೆ ಕೇಳಬೇಕು. ಈ ರೀತಿಯ ಮಾತುಗಳನ್ನು ದರ್ಶನ್ ಏಕೆ ಹೇಳಬೇಕಿತ್ತು ಎಂಬ ಬಗ್ಗೆ ವಿವರಣೆ ನೀಡಬೇಕು. ಅಲ್ಲದೆ ಹೆಣ್ಣುಮಕ್ಕಳ ಬಳಿ ಕ್ಷಮೆ ಕೇಳಬೇಕು ಎಂದು ಗೌಡತಿಯರ ಸೇನೆ ಆಗ್ರಹಿಸಿದೆ.

ದರ್ಶನ್
'ತಾಕತ್ತಿದ್ದರೆ ಮಾಡಿ ನೋಡೋಣ': ನಟ ದರ್ಶನ್ ಗೆ ನಿರ್ಮಾಪಕ ಉಮಾಪತಿ ಸವಾಲು

ಇನ್ನು ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಗೌಡತಿಯರ ಸೇನೆ, ಈ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಸಲೀಸಾಗಿ ಹರಿದಾಡುತ್ತಿದ್ದು ಯುವ ಜನತೆ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು? ಹೆಣ್ಣು ಮಕ್ಕಳ ಬಗೆಗಿನ ಅವರ ದೃಷ್ಟಿಕೋನ ಬದಲಾಗಬಹುದು. ದರ್ಶನ್​ ಸಂಪೂರ್ಣ ಬದಲಾಗಬೇಕು. ಹೆಣ್ಣು ಮಕ್ಕಳನ್ನು ತೆರೆಯಮೇಲೆ ಗೌರವಿಸಿದಂತೆ ತೆರೆಯ ಹಿಂದೆಯೂ ಗೌರವಿಸಬೇಕು. ಈ ನಿಟ್ಟಿನಲ್ಲಿ ಮಹಿಳಾ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಎಚ್ಚೆತ್ತುಕೊಳ್ಳದಿದ್ದರೆ ಹೋರಾಟ ಮಾಡಲು ಸಿದ್ಧ ಇದ್ದೇವೆ. ಮುಂದೆ ಸಾರ್ವಜನಿಕವಾಗಿ ಈ ರೀತಿ ಮಾತನಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ದೂರಿನಲ್ಲಿ ನಮೂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com