ಗೌರಿಶಂಕರ್ ಅಭಿನಯದ 'ಕೆರೆಬೇಟೆ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಕೆರೆಬೇಟೆ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಾಂಸ್ಕೃತಿಕ ಕಂಟೆಂಟ್ ಹೊಂದಿರುವ ಕಮರ್ಷಿಯಲ್ ಎಂಟರ್‌ಟೈನರ್ ಮಾರ್ಚ್ 15 ರಂದು ಬಿಡುಗಡೆಯಾಗಲಿದೆ.
ಕೆರೆಬೇಟೆ ಚಿತ್ರದ ಸ್ಟಿಲ್
ಕೆರೆಬೇಟೆ ಚಿತ್ರದ ಸ್ಟಿಲ್
Updated on

ರಾಜ್ ಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ಕೆರೆಬೇಟೆ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸಾಂಸ್ಕೃತಿಕ ಕಂಟೆಂಟ್ ಹೊಂದಿರುವ ಕಮರ್ಷಿಯಲ್ ಎಂಟರ್‌ಟೈನರ್ ಮಾರ್ಚ್ 15 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ದಿನಾಂಕ ಘೋಷಣೆ ಜೊತೆಗೆ ಚಿತ್ರದ ಟ್ರೇಲರ್ ಅನ್ನು ಗೌರಿಶಂಕರ್ ಅವರ ಒಂದು ವರ್ಷದ ಮಗಳು ಈಶ್ವರಿ ಮನ ಬಿಡುಗಡೆ ಮಾಡಿದರು. ಜೊತೆ ಜೊತೆಯಲಿ ಮತ್ತು ಸಾರಥಿಯಂತಹ ಚಿತ್ರಗಳನ್ನು ನಿರ್ದೇಶಿಸಿದ ದಿನಕರ್ ತೂಗುದೀಪ ಅವರು ಕೆರೆಬೇಟೆಯನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಚಿತ್ರವನ್ನು ಮಲೆನಾಡಿನ ಸುಂದರವಾದ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. ಮಲೆನಾಡು ತನ್ನ ಸಾಂಪ್ರದಾಯಿಕ ಮೀನುಗಾರಿಕೆಗೆ ಹೆಸರುವಾಸಿಯಾಗಿದ್ದು, ಇದುವೇ ಚಿತ್ರಕ್ಕೆ ತಿರುವು ನೀಡುತ್ತದೆ. ಹಳ್ಳಿಗಾಡಿನ ಮೋಡಿಯನ್ನು ಸೆರೆಹಿಡಿಯುತ್ತದೆ. ಚಿತ್ರಕ್ಕೆ ಗಗನ್ ಬದರಿಯಾ ಸಂಗೀತ ನೀಡಿದ್ದಾರೆ.

ಚಿತ್ರದಲ್ಲಿ ಗೌರಿ ಶಂಕರ್ ಜೊತೆಗೆ ಬಿಂದು ಶಿವರಾಮ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಮತ್ತು ಸಂಪತ್ ಮೈತ್ರೇಯ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಕೆರೆಬೇಟೆ ಚಿತ್ರದ ಸ್ಟಿಲ್
ಚಂದನವನದಲ್ಲಿ ಬರ್ತಿದೆ ಮಲೆನಾಡ ಸೊಗಡಿನ ಸಿನಿಮಾ 'ಕೆರೆಬೇಟೆ'; ಗೌರಿ ಶಂಕರ್ ನಾಯಕ

ಜನಮನ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಜೈಶಂಕರ್ ಪಟೇಲ್ ಅವರ ಬೆಂಬಲದೊಂದಿಗೆ, ರಾಜ್‌ ಗುರು ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಅವರು ಈ ಹಿಂದೆ ನಿರ್ದೇಶಕ ಪವನ್ ಒಡೆಯರ್ ಅವರೊಂದಿಗೆ ಗೂಗ್ಲಿ, ರಣವಿಕ್ರಮ ಮತ್ತು ನಟಸಾರ್ವಭೌಮ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಮಲೆನಾಡಿನಲ್ಲಿ ಹುಟ್ಟಿ ಬೆಳೆದ ರಾಜ್ ಗುರು ಅವರು ಕೆರೆಬೇಟೆ ಚಿತ್ರದೊಂದಿಗೆ ಆಳವಾಗಿ ಸಂಬಂಧ ಹೊಂದಿದ್ದಾರೆ. ಚಿತ್ರಕ್ಕೆ ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com