ತಮ್ಮ ಬಗ್ಗೆ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ನಟ ಜಗ್ಗೇಶ್!

ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ನಟ ಜಗ್ಗೇಶ್
ನಟ ಜಗ್ಗೇಶ್

ಬೆಂಗಳೂರು: ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಜಗ್ಗೇಶ್ ಸೋಷಿಯಲ್‌ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಕೆಲವು ಮಾಧ್ಯಮಗಳಲ್ಲಿ ಅವರ ಹೆಸರಿನಲ್ಲಿ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇದೀಗ ಜಗ್ಗೇಶ್‌ ಅವರು ತಮ್ಮ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಟೀಕೆ ಮಾಡುವವರಿಗೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.

ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.

ನಟ ಜಗ್ಗೇಶ್
ಹುಲಿ ಉಗುರು ಪ್ರಕರಣ: ಪ್ರಚಾರಕ್ಕಾಗಿ ದಾಳಿ ಮಾಡಿದ್ರಾ? ನಟ ಜಗ್ಗೇಶ್ ಗೆ ನೀಡಿದ್ದ ನೋಟಿಸ್ ಗೆ ತಡೆ ನೀಡಿದ ಹೈಕೋರ್ಟ್

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ವರ್ತೂರು ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದಾದ ಬಳಿಕ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಜಗ್ಗೇಶ್‌ ಕೂಡಲೇ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com