ಶರತ್ ಚಕ್ರವರ್ತಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶಿವರಾಜ್ ಕೆಆರ್ ಪೇಟೆ ನಾಯಕ

ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಶರತ್ ಚಕ್ರವರ್ತಿ ನಿರ್ದೇಶನದ ಚಿತ್ರದಲ್ಲಿ ಶಿವರಾಜ್ ಕೆಆರ್ ಪೇಟೆ
ಶರತ್ ಚಕ್ರವರ್ತಿ ನಿರ್ದೇಶನದ ಚಿತ್ರದಲ್ಲಿ ಶಿವರಾಜ್ ಕೆಆರ್ ಪೇಟೆ
Updated on

ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಶಿವರಾಜ್ ತಮ್ಮ ಮುಂದಿನ ಸಿನಿಮಾಗಾಗಿ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿರುವ ಶರತ್ ಚಕ್ರವರ್ತಿ ಅವರೊಂದಿಗೆ ಕೈಜೋಡಿಸುತ್ತಿದ್ದಾರೆ. ಅಯೋಗ್ಯ, ರೈಡರ್, ಮತ್ತು ನಾನು ಮತ್ತೆ ಗುಂಡ ಮುಂತಾದ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಶರತ್ ಇದೀಗ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಹೊಸ ಚಿತ್ರವನ್ನು ಶಿವರಾಜ್ ಅವರ ಹುಟ್ಟುಹಬ್ಬದಂದು ಮುಹೂರ್ತ ಸಮಾರಂಭದೊಂದಿಗೆ ಘೋಷಿಸಲಾಯಿತು.

'ನಾನು ಭಾವನಾತ್ಮಕ ವಿಷಯಗಳನ್ನು ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು ಸಾಮಾನ್ಯ ಚಿತ್ರಗಳಿಗಿಂತ ಭಿನ್ನವಾಗಿರುತ್ತದೆ. ಶಿವರಾಜ್ ಅವರು ನಾನು ಮತ್ತೆ ಗುಂಡ ಚಿತ್ರದ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ ಮತ್ತು ಈ ಚಿತ್ರವು ಅವರ ಅಭಿನಯದ ಮತ್ತೊಂದು ಅಂಶವನ್ನು ಪ್ರದರ್ಶಿಸುತ್ತದೆ' ಎಂದು ಶರತ್ ಹೇಳುತ್ತಾರೆ.

ಶರತ್ ಚಕ್ರವರ್ತಿ ನಿರ್ದೇಶನದ ಚಿತ್ರದಲ್ಲಿ ಶಿವರಾಜ್ ಕೆಆರ್ ಪೇಟೆ
ನಾನು ಮೊದಲು ಕಲಾವಿದ, ನಂತರ ನಾಯಕ: ಹಾಸ್ಯ ನಟ ಶಿವರಾಜ್ ಕೆಆರ್ ಪೇಟೆ

ಸದ್ಯಕ್ಕೆ ಚಿತ್ರತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ಚಿತ್ರತಂಡ ಜೂನ್ 20 ರಂದು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com