ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿ: ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ಜಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಪ್ರಕರಣ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಪ್ರಕರಣ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಜೊತೆ ಸ್ಯಾಂಡಲ್ ವುಡ್ ನ ಸ್ಟಾರ್ ಹಾಸ್ಯ ನಟ ಚಿಕ್ಕಣ್ಣ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಸಂಗ್ರಹ ಚಿತ್ರ
ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಪಟ್ಟ ವಿಚಾರಣೆ ವಿಡಿಯೋ-ಸಾಕ್ಷಿ ಹಂಚಿಕೊಳ್ಳಿ: ಪೊಲೀಸರಿಗೆ ನಟ ಉಪೇಂದ್ರ ಆಗ್ರಹ

ಹತ್ಯೆಯಾದ ಶನಿವಾರ ಮಧ್ಯಾಹ್ನದಿಂದ ಸ್ಟೋನಿಬ್ರೂಕ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಜೊತೆ ಚಿಕ್ಕಣ್ಣ ಅವರು ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಎಂದು ದರ್ಶನ್ ಹೊರಟಿದ್ದರು ಎಂದು ವರದಿಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಇದೀಗ ಚಿಕ್ಕಣ್ಣ ಅವರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆಂದು ಹೇಳಲಾಗುತ್ತಿದೆ. ಹಾಸ್ಯನಟ ವಿಚಾರಣೆಗೆ ಹಾಜರಾದ ಬಳಿಕ ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಯಾವುದಾದರೂ ಚರ್ಚೆಯಾಗಿತ್ತಾ ಎಂಂಬದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com