ಒಪ್ಪಿಗೆ ಇಲ್ಲದೆ ಹಾಡು ಬಳಕೆ: ಮಂಜುಮ್ಮೆಲ್ ಬಾಯ್ಸ್ ವಿರುದ್ಧ ಸಂಗೀತ ನಿರ್ದೇಶಕ ಇಳಯರಾಜ ಕಾನೂನು ಕ್ರಮದ ಎಚ್ಚರಿಕೆ!

ಎಲ್ಲರ ಬಾಯಲ್ಲೂ ಮಲಯಾಳಂನ ಈ ಸಿನಿಮಾದ್ದೇ ಮಾತು, ಮೆಚ್ಚುಗೆ. ಆದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಮಾತ್ರ ಈ ಸಿನಿಮಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿ ಬಹು ಜನಪ್ರಿಯತೆ ಗಳಿಸಿದ್ದ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ತಂಡಕ್ಕೆ ಇಳಯರಾಜ ಅವರು ಕಾಪಿರೈಟ್ ನೋಟಿಸ್ ನೀಡಿದ್ದಾರೆ.
ಇಳಯರಾಜ
ಇಳಯರಾಜ
Updated on

ಚೆನ್ನೈ: ಎಲ್ಲರ ಬಾಯಲ್ಲೂ ಮಲಯಾಳಂನ ಈ ಸಿನಿಮಾದ್ದೇ ಮಾತು, ಮೆಚ್ಚುಗೆ. ಆದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಮಾತ್ರ ಈ ಸಿನಿಮಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿ ಬಹು ಜನಪ್ರಿಯತೆ ಗಳಿಸಿದ್ದ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ತಂಡಕ್ಕೆ ಇಳಯರಾಜ ಅವರು ಕಾಪಿರೈಟ್ ನೋಟಿಸ್ ನೀಡಿದ್ದಾರೆ.

1991 ರ ತಮಿಳು ಚಲನಚಿತ್ರ ಗುಣಾದಿಂದ ಕಣ್ಮಣಿ ಅನ್ಬೋಡು ಹಾಡನ್ನು ಬಳಸಿದ್ದಕ್ಕಾಗಿ ಮಲಯಾಳಂ ಬ್ಲಾಕ್ ಬಸ್ಟರ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಇಳಯರಾಜ
ಇಳಯರಾಜ ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತ ಗಾಯಕಿ ಭವತಾರಿಣಿ ಶ್ರೀಲಂಕಾದಲ್ಲಿ ನಿಧನ

ಗುಣ ಸಿನಿಮಾ 1991ರಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಸಿನಿಮಾದ ಕಣ್ಮಣಿ..ಹಾಡು ಗಮನ ಸೆಳೆದಿತ್ತು. ಈ ಹಾಡನ್ನು ಜನರು ಬಹಳ ಇಷ್ಟಪಟ್ಟಿದ್ದರು. ಈ ಹಾಡು ‘ಮಂಜುಮ್ಮೆಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಈ ಹಾಡನ್ನು ತಮ್ಮ ಒಪ್ಪಿಗೆ ಇಲ್ಲದೆ ಅಕ್ರಮವಾಗಿ ಬಳಕೆ ಮಾಡಲಾಗಿದೆ ಎಂದು ಇಳಯರಾಜ ಅವರು ಆರೋಪಿಸಿದ್ದಾರೆ.

ಮಂಜುಮ್ಮೆಲ್ ಬಾಯ್ಸ್ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಅವರು ನೋಟಿಸ್ ನೀಡಿದ್ದಾರೆ. ‘ಕಣ್ಮಣಿ ಅನ್ಬೋದು ಕಾದಲನ್..’ ಹಾಡಿನ ಹಕ್ಕು ನಮ್ಮದು, ಈ ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ’ ಎಂದು ನೋಟಿಸ್​ನಲ್ಲಿ ಹೇಳಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com