'ರಂಗಿತರಂಗ' ನಂತರ ಮತ್ತೆ ಜೊತೆಯಾದ ನಿರೂಪ್ ಭಂಡಾರಿ - ಸಾಯಿಕುಮಾರ್!

ಪೋಸ್ಟ್ ಮಾಸ್ಟರ್ ಮತ್ತು ರಂಗಿತರಂಗದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿದ್ದ ಸಾಯಿಕುಮಾರ್, ಇನ್ನೂ ಹೆಸರಿಡದ ಈ ಯೋಜನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ.
ನಿರೂಪ್ ಭಂಡಾರಿ- ಸಾಯಿಕುಮಾರ್
ನಿರೂಪ್ ಭಂಡಾರಿ- ಸಾಯಿಕುಮಾರ್
Updated on

2015 ರಲ್ಲಿ ಅನುಪ್ ಭಂಡಾರಿ ನಿರ್ದೇಶನದ ರಂಗಿತರಂಗ ಸಿನಿಮಾದಲ್ಲಿ ನಿರೂಪ್ ಭಂಡಾರಿ ಮತ್ತು ಸಾಯಿಕುಮಾರ್ ನಟಿಸಿದ್ದರು. ಆ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಇದೀಗ, ಸಚಿನ್ ವಾಲಿ ನಿರ್ದೇಶನದ ಮುಂಬರುವ ಚಿತ್ರದಲ್ಲಿ ಇಬ್ಬರೂ ಮತ್ತೆ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ.

ಪೋಸ್ಟ್ ಮಾಸ್ಟರ್ ಮತ್ತು ರಂಗಿತರಂಗದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿದ್ದ ಸಾಯಿಕುಮಾರ್, ಇನ್ನೂ ಹೆಸರಿಡದ ಈ ಯೋಜನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುವ ನಿರೀಕ್ಷೆಯಿದೆ. ಪಾತ್ರಗಳ ವಿವರಗಳು ಮತ್ತು ಶೀರ್ಷಿಕೆಯನ್ನು ತಯಾರಕರು ಮುಚ್ಚಿಟ್ಟಿದ್ದಾರೆ. ಫೆಬ್ರವರಿ 6 ರಂದು ಫಸ್ಟ್ ಲುಕ್ ಜೊತೆಗೆ ಅವುಗಳನ್ನು ಅನಾವರಣಗೊಳಿಸಲು ನಿರ್ಧರಿಸಿದ್ದಾರೆ.

ಸದ್ಯ ಸಿನಿಮಾ ಶೂಟಿಂಗ್ ಹಂತದಲ್ಲಿದೆ, ಚಿತ್ರವು ನೈಜತೆ ಮತ್ತು ಕಾಲ್ಪನಿಕ ಕಥೆಗಳ ಆಕರ್ಷಕ ಸಮ್ಮಿಲ ಹೊಂದಿದೆ, ಸಾಮಾಜಿಕ ಸಂಪರ್ಕಗಳು, ಹಾಸ್ಯ ಮತ್ತು ಕೌಟುಂಬಿಕ ಮನರಂಜನೆಯ ವಿಷಯಗಳನ್ನು ಒಳಗೊಂಡಿದೆ. ಬೃಂದಾ ಆಚಾರ್ಯ ಮತ್ತು ಅಂಕಿತಾ ಅಮರ್ ನಟಿಸಿದ್ದಾರೆ. ಮೊದಲ ಬಾರಿಗೆ ನಿರೂಪ್ ಭಂಡಾರಿ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಅಂಕಿತ್ ಸೋನಿಗಾರ ನಿರ್ಮಿಸಿದ್ದು, ಪ್ರಶಾಂತ್ ಮುಳಗೆ ಸಹ ನಿರ್ಮಾಪಕರಾಗಿದ್ದಾರೆ. ಸಚಿನ್ ಬಸ್ರೂರು ಸಂಗೀತ ಸಂಯೋಜನೆಯ ಹೊಣೆ ಹೊತ್ತಿದ್ದಾರೆ. ಉಲ್ಲಾಸ್ ಹೈದೂರ್ ಕಲಾ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ಸಂದೀಪ್ ವಲ್ಲೂರಿ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com