
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ. ಹೌದು ಕೆಲ ಜೈಲಿನಲ್ಲಿ ಇದ್ದು ಹೊರಬಂದಿದ್ದ ರಜತ್ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ ಇಂದು ಪೊಲೀಸರು ಮತ್ತೆ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ ರಜತ್ಗೆ ಏಪ್ರಿಲ್ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರು ಇತ್ತೀಚೆಗೆ ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಹೀಗಾಗಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಅಡಿ ದೂರು ದಾಖಲಿಸಿಕೊಂಡು ಇಬ್ಬರನ್ನೂ ಬಂಧಿಸಿದ್ದರು. ಕೆಲ ದಿನ ಜೈಲಿನಲ್ಲಿದ್ದ ವಿನಯ್ ಹಾಗೂ ರಜತ್, ಜಾಮೀನಿನ ಮೇಲೆ ಹೊರಬಂದಿದ್ದರು.
ಜಾಮೀನು ನೀಡಿದ್ದ ಕೋರ್ಟ್ ವಿಚಾರಣೆಗೆ ಖುದ್ದು ಹಾಜರಾತಿ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿತ್ತು. ಆದರೆ ರಜತ್, ವಿಚಾರಣೆಗೆ ಹಾಜರಾಗದ ಕಾರಣ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಏಪ್ರಿಲ್ 29ರ ವರೆಗೆ ರಜತ್ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮುಂದಿನ ಎಂಟು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಬೇಕಾಗಿದೆ.
Advertisement