
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ 'ಸಿಕಂದರ್' ಶೂಟಿಂಗ್ ಸಂದರ್ಭ ಗಾಯಗೊಂಡಿದ್ದರು. ಕಾಲಿಗೆ ಗಾಯವಾಗಿರುವುದಾಗಿ ಸ್ವತಃ ನಟಿಯೇ ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ತಿಳಿಸಿದ್ದರು. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಶೀಘ್ರವೇ ಚೇತರಿಸಿಕೊಳ್ಳಿ ಎಂದು ಹಾರೈಸಿದ್ದಾರೆ.
ಜಿಮ್ನಲ್ಲಿ ವರ್ಕ್ಔಟ್ ಮಾಡುವಾಗ ರಶ್ಮಿಕಾ ಮಂದಣ್ಣ ಕಾಲಿಗೆ ಪೆಟ್ಟಾಗಿತ್ತು. ನಟಿ ವಿಶ್ರಾಂತಿ ಪಡೆಯುತ್ತಿದ್ದರು. ಆದ್ರೀಗ ತಮ್ಮ ಮುಂಬರುವ ಛಾವಾ ಚಿತ್ರದ ಪ್ರಚಾರ ಹಿನ್ನೆಲೆ, ಹೈದರಾಬಾದ್ನಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಗಾಯಗೊಂಡ ನಟಿ ಅಭಿಮಾನಿಗಳೆದುರು ಕಾಣಿಸಿಕೊಂಡಿದ್ದಾರೆ.
ರಶ್ಮಿಕಾ ಇಂದು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಅದೂ ಕೂಡಾ ವೀಲ್ ಚೇರ್ನಲ್ಲಿ. ಕಾರಿನಿಂದ ಇಳಿದು ಕುಂಟುತ್ತಲೇ ನಡೆದ ನಟಿ ವೀಲ್ ಚೇರ್ ಮೇಲೆ ಕುಳಿತಿದ್ದಾರೆ. ನಂತರ ಅವರನ್ನು ಕರೆದೊಯ್ಯಲಾಗಿದೆ.
Advertisement