ಬಿ. ಸರೋಜಾದೇವಿ ಭಾರತೀಯ ಚಿತ್ರರಂಗದ ಆದರ್ಶಪ್ರಾಯ ಐಕಾನ್: ಪ್ರಧಾನಿ ನರೇಂದ್ರ ಮೋದಿ

ಭಾರತೀಯ ಸಿನಿಮಾ ಮತ್ತು ಸಂಸ್ಕೃತಿಯ ಆದರ್ಶಪ್ರಾಯ ಐಕಾನ್ ಆಗಿ ಸರೋಜಾ ದೇವಿ ನೆನಪಿನಲ್ಲಿ ಉಳಿಯಲಿದ್ದಾರೆ. ಅವರ ವೈವಿಧ್ಯಮಯ ಅಭಿನಯ ಅಳಿಸಲಾಗದ ಗುರುತುಗಳನ್ನು ಬಿಟ್ಟಿವೆ.
B Saroja devi
ಬಿ. ಸರೋಜಾದೇವಿ
Updated on

ಬೆಂಗಳೂರು: ದಕ್ಷಿಣ ಭಾರತದ ಹಿರಿಯ ನಟಿ, ಅಭಿನಯ ಸರಸ್ವತಿ ಬಿ.ಸರೋಜಾ ದೇವಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬಹುಭಾಷಾ ನಟಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಸರೋಜಾ ದೇವಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಖ್ಯಾತ ಚಲನಚಿತ್ರ ನಟಿ ಬಿ.ಸರೋಜಾ ದೇವಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಭಾರತೀಯ ಸಿನಿಮಾ ಮತ್ತು ಸಂಸ್ಕೃತಿಯ ಆದರ್ಶಪ್ರಾಯ ಐಕಾನ್ ಆಗಿ ಸರೋಜಾ ದೇವಿ ನೆನಪಿನಲ್ಲಿ ಉಳಿಯಲಿದ್ದಾರೆ. ಅವರ ವೈವಿಧ್ಯಮಯ ಅಭಿನಯ ಅಳಿಸಲಾಗದ ಗುರುತುಗಳನ್ನು ಬಿಟ್ಟಿವೆ. ವಿವಿಧ ಭಾಷೆಗಳನ್ನು ವ್ಯಾಪಿಸಿರುವ ಮತ್ತು ವೈವಿಧ್ಯಮಯ ವಿಷಯಗಳನ್ನು ಒಳಗೊಂಡ ಕಾರ್ಯ ಅವರ ಬಹುಮುಖ ಸ್ವಭಾವವನ್ನು ಎತ್ತಿ ತೋರಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಲವು ರಾಜಕಾರಣಿಗಳು ಮತ್ತು ಚಲನಚಿತ್ರ ವ್ಯಕ್ತಿಗಳು ಸೇರಿದಂತೆ ನೂರಾರು ಜನರು ಹಿರಿಯ ನಟಿಗೆ ಗೌರವ ಸಲ್ಲಿಸಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ನಟರಾದ ಶಿವರಾಜ್‌ಕುಮಾರ್, ಜಗ್ಗೇಶ್, ಮತ್ತು ಉಪೇಂದ್ರ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ ಮತ್ತು ಜನಾರ್ದನ ರೆಡ್ಡಿ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಮತ್ತು ಇತರರು ನಟಿಗೆ ಅಂತಿಮ ನಮನ ಸಲ್ಲಿಸಿದರು.

ಮಂಗಳವಾರ ಬೆಳಗ್ಗೆ 11.30 ಕ್ಕೆ ಅಂತ್ಯಕ್ರಿಯೆಗಾಗಿ ಚನ್ನಪಟ್ಟಣದ ಅವರ ಗ್ರಾಮ ದಶಾವರಕ್ಕೆ ಕೊಂಡೊಯ್ಯಲಾಗುವುದು ಎಂದು ಅವರ ಪುತ್ರ ಹರ್ಷ ಗೌತಮ್ ತಿಳಿಸಿದ್ದಾರೆ. ಕುಟುಂಬವು ಅವರ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು, ಕಾರ್ಯವಿಧಾನ ಪೂರ್ಣಗೊಂಡಿದೆ. ನಟಿಯ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು.

B Saroja devi
ಬಿ.ಸರೋಜಾದೇವಿ- ಎಸ್.ಎಂ ಕೃಷ್ಣ ಪ್ರೇಮ್ ಕಹಾನಿ: ಮದುವೆವರೆಗೂ ಬಂದಿದ್ದ ಸಂಬಂಧ ಮುರಿದು ಬಿದ್ದಿದ್ದೇಕೆ?

2008 ರಲ್ಲಿ, ಭಾರತದ 60 ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಸರೋಜಾದೇವಿ ಅವರಿಗೆ ಭಾರತ ಸರ್ಕಾರದಿಂದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. ಅವರು ಪದ್ಮಭೂಷಣ (1992) ಮತ್ತು ಪದ್ಮಶ್ರೀ (1969) ಪುರಸ್ಕೃತರಾಗಿದ್ದಾರೆ.

ತಮಿಳುನಾಡು ಸರ್ಕಾರದಿಂದ ಕಲೈಮಾಮಣಿ ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಸರ್ಕಾರದಿಂದ ಡಾ. ರಾಜ್‌ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ಮತ್ತು 2009 ರಲ್ಲಿ ಎರಡನೇ ಬಾರಿಗೆ ಆಂಧ್ರಪ್ರದೇಶ ಸರ್ಕಾರದಿಂದ ಎನ್‌ಟಿಆರ್ ರಾಷ್ಟ್ರೀಯ ಪ್ರಶಸ್ತಿ ಸೇರಿವೆ. ಸರೋಜಾ ದೇವಿ ಅವರ ಕೊನೆಯ ಪರದೆಯ ಮೇಲೆ ಕಾಣಿಸಿಕೊಂಡಿದ್ದು 2019 ರ ಪುನೀತ್ ರಾಜ್‌ಕುಮಾರ್ ಅಭಿನಯದ ನಟಸಾರ್ವಭೌಮ ಕೊನೆಯ ಸಿನಿಮಾವಾಗಿತ್ತು.

ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್‌ ಸಹ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದ ಮಹಾನ್ ನಟಿ ಸರೋಜಾ ದೇವಿ ಈಗ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಒಂದು ಸುವರ್ಣ ಸಿನಿಮಾ ಯುಗ ಅಂತ್ಯಗೊಂಡಿದೆʼ ಅಂತ ಭಾವುಕ ಸಂದೇಶವೊಂದನ್ನ ಫೋಟೋ ಜೊತೆಗೆ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com