ತೆಲುಗಿನತ್ತ ಮುಖ ಮಾಡಿದ ರಿಷಬ್ ಶೆಟ್ಟಿ: ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ; ಪೋಸ್ಟರ್ ಬಿಡುಗಡೆ!

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ 2 ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡ ಬೆನ್ನಲ್ಲೇ ಪರಭಾಷಾ ಚಿತ್ರಗಳತ್ತ ಮುಖ ಮಾಡಿದ್ದಾರೆ.
Rishab Shetty
ರಕ್ಷಿತ್ ಶೆಟ್ಟಿ
Updated on

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ 2 ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡ ಬೆನ್ನಲ್ಲೇ ಪರಭಾಷಾ ಚಿತ್ರಗಳತ್ತ ಮುಖ ಮಾಡಿದ್ದಾರೆ. ಜೈ ಹನುಮಾನ್, ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಪ್ರತಿಷ್ಠಿತ ಯೋಜನೆಯನ್ನು ಘೋಷಿಸಿದ್ದಾರೆ. ಈ ಬಾರಿ ಅವರು ನೇರವಾಗಿ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಅಧಿಕೃತವಾಗಿ ರಿಷಬ್ ಶೆಟ್ಟಿ ಅವರು ಪೌರಾಣಿಕ/ಐತಿಹಾಸಿಕ/ಅವಧಿಯ ನಾಟಕ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಘೋಷಿಸಿದೆ. ಇದರ ಜೊತೆಗೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿವರಗಳನ್ನು ನೀಡಲಾಗಿದೆ. 'ಎಲ್ಲಾ ಬಂಡಾಯಗಾರರು ಯುದ್ಧದಲ್ಲಿ ಹುಟ್ಟುವುದಿಲ್ಲ. ವಿಧಿ ಕೆಲವನ್ನು ಆಯ್ಕೆ ಮಾಡುತ್ತದೆ. ಇದು ಬಂಡಾಯಗಾರನ ಕಥೆ' ಎಂಬ ಶೀರ್ಷಿಕೆಯನ್ನು ನೀಡಲಾಗಿದೆ.

ಚಿತ್ರವನ್ನು ಅಶ್ವಿನ್ ಗಂಗರಾಜು ನಿರ್ದೇಶಿಸುತ್ತಿದ್ದಾರೆ. ಪೋಸ್ಟರ್ ಇದು 18ನೇ ಶತಮಾನದಲ್ಲಿ ನಡೆಯುವ ಐತಿಹಾಸಿಕ ಆಕ್ಷನ್ ನಾಟಕ ಎಂದು ಸೂಚಿಸುತ್ತದೆ. 18 ನೇ ಶತಮಾನದ ಪ್ರಕ್ಷುಬ್ಧ ಬಂಗಾಳ ಪ್ರಾಂತ್ಯದಲ್ಲಿ ಬಂಡಾಯಗಾರರ ಹೊರಹೊಮ್ಮುವಿಕೆಯ ಬಗ್ಗೆ ಚಿತ್ರ ಇರುತ್ತದೆ ಎಂದು ಹೇಳಲಾಗಿದೆ. ಈ ಚಿತ್ರದ ಕುರಿತು ಹೆಚ್ಚಿನ ವಿವರಗಳು ಶೀಘ್ರದಲ್ಲೇ ತಿಳಿಯುವ ಸಾಧ್ಯತೆಯಿದೆ.

Rishab Shetty
'ಲೂಸ್ ಮಾದ' ಆಗಿ ಬರುತ್ತಿದ್ದಾರೆ ನಟ ಯೋಗಿ; ಚಿತ್ರಕ್ಕೆ ರಂಜಿತ್ ಕುಮಾರ್ ಗೌಡ ಆ್ಯಕ್ಷನ್ ಕಟ್

ರಿಷಭ್ ಶೆಟ್ಟಿ ತೆಲುಗು ಚಿತ್ರಗಳ ಸರಣಿಯಲ್ಲಿ ನಟಿಸಲು ಆಸಕ್ತಿ ತೋರಿಸುತ್ತಿದ್ದಾರೆ. ಇತ್ತೀಚೆಗೆ, ಪ್ರಶಾಂತ್ ವರ್ಮಾ ಅವರ 'ಜೈ ಹನುಮಾನ್' ಚಿತ್ರದಲ್ಲಿ ಹನುಮಾನ್ ಪಾತ್ರದಲ್ಲಿ ನಟಿಸುವುದಾಗಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈಗ ಅವರು ನಾಗ ವಂಶಿ ಬ್ಯಾನರ್ ಅಡಿಯಲ್ಲಿ ಸಿನಿಮಾ ಮಾಡಲು ಸಿದ್ಧರಾಗಿದ್ದಾರೆ. ಅಲ್ಲದೆ, ರಿಷಭ್ ಶೆಟ್ಟಿ ಕಾಂತಾರ 2 ಅನ್ನು ನಿರ್ದೇಶಿಸಿದ್ದಾರೆ. ಮತ್ತು ಸಂದೀಪ್ ಸಿಂಗ್ ನಿರ್ದೇಶನದ ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com