ಮಾನವೀಯತೆ ಮರೆತ 'ಎಕ್ಕ' ಚಿತ್ರತಂಡ: ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಮಹಿಳೆಗೆ ಕಾರು ಡಿಕ್ಕಿ; ತಿರುಗಿಯೂ ನೋಡದೆ ಹೋದ ಬೌನ್ಸರ್‌ಗಳು!

ನಟನ ಬೌನ್ಸರ್‌ಗಳು ಇದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ.
Yuvarajkumar
ನಟ ಯುವ ರಾಜ್‌ಕುಮಾರ್
Updated on

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ನಟ ಯುವ ರಾಜ್‌ಕುಮಾರ್ ನಟನೆಯ ಎಕ್ಕ ಚಿತ್ರತಂಡ ಭಾನುವಾಪ ಭೇಟಿ ನೀಡಿದ್ದು, ಈ ವೇಳೆ ಎಡವಟ್ಟು ನಡೆದಿದೆ,

ನಟನ ಬೌನ್ಸರ್‌ಗಳು ಇದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಆದರೂ, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೇ ಅಮಾನವೀಯ ವರ್ತನೆ ತೋರದ ಆರೋಪ ಕೇಳಿ ಬಂದಿದೆ.

ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ ಅಪಘಾತ ನಡೆದಿದೆ. ಸಿದ್ಧಗಂಗಾ ಮಠದ ಶಾಲೆಗೆ ಮಗುವನ್ನು ಬಿಟ್ಟು ಹೋಗಲು ಮಹಿಳೆ ಬಂದಿದ್ದರು. ವಾಪಸ್ ತೆರಳುತ್ತಿದ್ದ ವೇಳೆ ಎಕ್ಕ ಚಿತ್ರತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲೇ ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿದೆ. ಈ ವೇಳೆ ಬಳ್ಳಾರಿ ಮೂಲದ ಲಿಂಗಮ್ಮ ಎಂಬುವರ ಕಾಲಿಗೆ ಪೆಟ್ಟು ಬಿದ್ದಿದೆ. ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ.

ಮಹಿಳೆ ನರಳಾಡುತ್ತ ಆಸ್ಪತ್ರೆಗೆ ಸೇರಿಸುವಂತೆ ಕೋರಿದರೂ ಗಮನಸದೇ ಎಕ್ಕ ಚಿತ್ರತಂಡ ಸ್ಥಳದಿಂದ ತೆರಳಿದೆ. ಚಿತ್ರತಂಡದ ಜತೆ ನಟ ಯುವರಾಜ್ ಕುಮಾರ್ ಸಹ ಇದ್ದರು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕ್ಯಾತಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com