
ಉಡುಪಿ: ಕನ್ನಡದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು ಪೋಷಕರು, ಸಂಬಂಧಿಗಳ ಸಮ್ಮುಖದಲ್ಲಿ ವೈದಿಕ ಶಾಸ್ತ್ರದಂತೆ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ವಿವಾಹವಾಗಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಬಿಗ್ಬಾಸ್ ಖ್ಯಾತಿಯ ಧನರಾಜ್, ರಜತ್ ಕಿಶನ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದರು. 12 ವರ್ಷಗಳಿಂದ ಪರಸ್ಪರರು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.
Advertisement