ಶಿವಣ್ಣನ ಮನೆಯಲ್ಲಿ ಸೀಕ್ರೆಟ್ ಮೀಟಿಂಗ್, ಸಭೆಯಲ್ಲಿ ಯಾರ್ಯಾರು ಇದ್ರು, ಚರ್ಚಿಸಿದ್ದೇನು?

ಸಭೆಯಲ್ಲಿ ಗಣೇಶ್, ದುನಿಯಾ ವಿಜಯ್, ಧ್ರುವಾ ಸರ್ಜಾ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು. ಸಿನಿಮಾ ಪ್ರದರ್ಶಕರು ಮತ್ತು ವಿತರಕರು ಕೂಡ ಮೀಟಿಂಗ್​ನಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.
Shivaraj Kumar
ಶಿವರಾಜ್ ಕುಮಾರ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರ ನಾಗವಾರದ ನಿವಾಸದಲ್ಲಿ ಇಂದು ಇದಕ್ಕಿದ್ದಂತೆ ಸೀಕ್ರೆಟ್ ಮೀಟಿಂಗ್ ನಡೆದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಭೆಯಲ್ಲಿ ಗಣೇಶ್, ದುನಿಯಾ ವಿಜಯ್, ಧ್ರುವಾ ಸರ್ಜಾ ಸೇರಿದಂತೆ ಹಲವು ನಟರು ಭಾಗಿಯಾಗಿದ್ದರು. ಸಿನಿಮಾ ಪ್ರದರ್ಶಕರು ಮತ್ತು ವಿತರಕರು ಕೂಡ ಮೀಟಿಂಗ್​ನಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಕನ್ನಡ ಚಿತ್ರರಂಗ ಸದ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಥೀಯೇಟರ್​ಗೆ ಜನ ಬರುತ್ತಿಲ್ಲ. ಕನ್ನಡ ಸಿನಿಮಾಗಳಿಗೆ ಥೀಯೇಟರ್ ಕೊರತೆ, ಟಿಕೆಟ್ ಬೆಲೆ ವಿಚಾರ, ದಿನೇ ದಿನೇ ಕಡಿಮೆ ಆಗುತ್ತಿರೋ ಕನ್ನಡ ಸಿನಿಮಾಗಳು, ಪ್ರೊಡ್ಯೂಸರ್​ಗಳ ಸಂಕಷ್ಟ, ವಿತರಕರು-ಪ್ರದರ್ಶಕರ ಸಂಕಷ್ಟ ಹೀಗೇ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ.

ಸಭೆ ಬಳಿಕ ಮಾಹಿತಿ ನೀಡಿರುವ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಥಿಯೇಟರ್ ಸಮಸ್ಯೆ ದೂರ ಮಾಡಲು, ಶಿವಣ್ಣ ಮನೇಲಿ ಸಭೆ ಆಯೋಜಿಸಲಾಗಿತ್ತು. ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆದಿದೆ. ಹೀರೋಗಳು ಐದು ವರ್ಷಕ್ಕೆ ಒಂದು ಸಿನಿಮಾ ಮಾಡುವ ಬದಲು, ವರ್ಷಕ್ಕೆ ಎರಡು ಸಿನಿಮಾಗಳು ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಥಿಯೇಟರ್ ಮುಚ್ಚುತ್ತಿರೋದರ ಕುರಿತು ಬಹುಮುಖ್ಯವಾಗಿ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು.

Shivaraj Kumar
ಕನ್ನಡ ಚಿತ್ರರಂಗ-ಪ್ರೇಕ್ಷಕರ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮಾತು; Video

ಸ್ಟಾರ್ ಸಿನಿಮಾಗಳಿಂದ ಥಿಯೇಟರ್​ಗಳು ಉಳಿಯುತ್ತವೆ. ಹೀಗಾಗಿ ಸ್ಟಾರ್​ಗಳು ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಬೇಕು. ಥಿಯೇಟರ್​ಗಳಿಗೆ ಜನ ಬರುತ್ತಿಲ್ಲ, ಇದು ದೊಡ್ಡ ಸಮಸ್ಯೆ ಆಗಿದೆ. ಥಿಯೇಟರ್​ಗಳಿಗೆ ಲ್ಯಾಂಡ್ ಟ್ಯಾಕ್ಸ್, ಸಬ್ಸಿಡಿ, ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವಂತೆ ಮುಖ್ಯಮಂತ್ರಿ ಬಳಿ ಬೇಡಿಕೆ ಇಡಲಾಗುವುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com