SIIMA 2025: ಕನ್ನಡ ಅಷ್ಟೊಂದು ಕೆಳಮಟ್ಟಕ್ಕೆ ಇಳಿದಿಲ್ಲ; ವೇದಿಕೆಯಲ್ಲೇ ಆಯೋಜಕರಿಗೆ ದುನಿಯಾ ವಿಜಯ್ ಎಚ್ಚರಿಕೆ, Video!

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.
Duniya Vijay
ದುನಿಯಾ ವಿಜಯ್
Updated on

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ. ದುಬೈನಲ್ಲಿ ನಡೆದ ಸಮಾರಂಭದಲ್ಲಿ ಬೇಕು ಅಂತಲೇ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿಜಿ ಸಿಟ್ಟು ಕೋಪಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಭೀಮಾ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ.

Duniya Vijay
SIIMA ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ; ಪ್ರಶಸ್ತಿ ವಿಜೇತರ ವಿವರ ಹೀಗಿದೆ...

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com