ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಅರ್ಪಿಸಿದ  ಇಳಯರಾಜ
ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ
Updated on

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದರು.

ನನ್ನ ಜೀವನದಲ್ಲಿ ಏನೂ ಇರಲಿಲ್ಲ ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಎಲ್ಲವೂ ದೈವಿಕ ತಾಯಿ ಮೂಕಾಂಬಿಕೆಯ ಕೃಪೆ ಮತ್ತು ಆಶೀರ್ವಾದದಿಂದ ನಡೆದಿದೆ ಎಂದರು. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು. ಇಳಯರಾಜ ಅವರ ಮಗ ಕಾರ್ತಿಕ್ ಇಳಯರಾಜ, ಮೊಮ್ಮಗ ಯತೀಶ್ ಇಳಯರಾಜ ಮತ್ತು ಇತರರು ಉಪಸ್ಥಿತರಿದ್ದರು.

ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಅರ್ಪಿಸಿದ  ಇಳಯರಾಜ
ಹಾಡುಗಳ ಅನಧಿಕೃತ ಬಳಕೆ: 'ಗುಡ್ ಬ್ಯಾಡ್ ಅಗ್ಲಿ' ನಿರ್ಮಾಪಕರಿಗೆ ಇಳಯರಾಜ ಲೀಗಲ್ ನೋಟಿಸ್; 5 ಕೋಟಿ ರೂಪಾಯಿಗೆ ಡಿಮ್ಯಾಂಡ್!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com