ನನ್ನಿಂದ ತಪ್ಪಾಯ್ತು, 'ಅಪ್ಪು ಸರ್ ದೇವರಿದ್ದಂತೆ': ಪುನೀತ್, ದರ್ಶನ್ ಕ್ಷಮೆ ಕೋರಿದ ಕನಕಪುರ ಶ್ರೀನಿವಾಸ್!

ಶಿವರಾಜ್‌ಕುಮಾರ್‌ ಅವರು ಕೂಡ ನಮಗೆ ಎಷ್ಟೋ ಸಹಾಯ ಮಾಡಿದ್ದಾರೆ. ಐದು ಸಿನಿಮಾ ಮಾಡಿದ್ದೀನಿ. ಅವರ ಉಪಕಾರವನ್ನ ನಾವು ಯಾವತ್ತೂ ಮರೆಯೋದಿಲ್ಲ. ನಿಮಗೆಲ್ಲಾ ಗೊತ್ತು ನಾನು ವಿದ್ಯಾವಂತ ಅಲ್ಲ. ಮನಸ್ಸಲ್ಲಿ ಏನಿತ್ತೋ ಅದನ್ನ ಹೇಳಿಬಿಟ್ಟಿದ್ದೀನಿ
puneeth, Darshan And kanakapura srinivas
ಪುನೀತ್, ದರ್ಶನ್ ಮತ್ತು ಕನಕಪುರ ಶ್ರೀನಿವಾಸ್
Updated on

ಬೆಂಗಳೂರು: ಪುನೀತ್ ರಾಜ್‌ಕುಮಾರ್, ಶಿವರಾಜ್‌ಕುಮಾರ್, ದರ್ಶನ್ ಸೇರಿದಂತೆ ಹಲವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಾಣಿಜ್ಯ ಮಂಡಳಿಯಲ್ಲಿ ಬಹಿರಂಗವಾಗಿ ಕ್ಷಮೆ ಕೋರಿದ್ದಾರೆ. "ಆರ್ಥಿಕ ಸಂಕಷ್ಟ ಮತ್ತು ಸಿನಿಮಾದ ಬಿಡುಗಡೆಯ ಒತ್ತಡದಲ್ಲಿ ತಿಳಿಯದೆ ಮಾತನಾಡಿದ್ದೇನೆ, ಏಳು ಕೋಟಿ ಕನ್ನಡಿಗರು ನನ್ನನ್ನು ಕ್ಷಮಿಸಿ" ಎಂದಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ. ಕಾಟನ್‌ಪೇಟೆ ಗೇಟ್‌ ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ಎಮೋಷನಲ್‌ ಆಗಿ ಕೆಲವು ವಿಚಾರಗಳನ್ನ ಮಾತನಾಡಿಬಿಟ್ಟೆ. ನನ್ನ ಕಾಟನ್‌ಪೇಟೆ ಗೇಟ್‌ ಸಿನಿಮಾ ರಿಲೀಸ್‌ ಆಗಬೇಕಿತ್ತು, ಹಣದ ಅವಶ್ಯಕತೆ ಇತ್ತು. ಹಾಗಾಗಿ, ತುಂಬ ದುಃಖದಿಂದ ಹಾಗೆಲ್ಲ ಮಾತನಾಡಿಬಿಟ್ಟೆ.

ರಾಜ್‌ಕುಮಾರ್‌ ಅವರ ಮೇಲೆ ನನಗೆ ತುಂಬಾ ಅಭಿಮಾನ ಇದೆ. ಪುನೀತ್‌ ಸರ್‌ ದೇವರು. ನಾನು ಅವರ ಜೊತೆ ಸಿನಿಮಾ ಮಾಡೋಕ್ಕಿಂತ ಮುಂಚೆಯಿಂದಲೂ ಅವರ ಜೊತೆ ನನಗೆ ಒಡನಾಟ ಇತ್ತು. ಕಾಟನ್‌ಪೇಟೆ ಗೇಟ್‌ ಸಿನಿಮಾ ಈವೆಂಟ್‌ನಲ್ಲಿ, ಮಯೂರ ಅಂತ ಒಂದು ಸಿನಿಮಾ ಸೆಟ್ಟೇರಬೇಕಿತ್ತು. ಆದರೆ, ಆಗಲಿಲ್ಲ. ದಯವಿಟ್ಟು ನನ್ನನ್ನ ಕ್ಷಮಿಸಿ, ಆ ಮಾತುಗಳನ್ನೆಲ್ಲಾ ನಾನು ವಾಪಾಸ್‌ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ಕ್ಷಮಿಸಿ ಏನೋ ತಪ್ಪಾಗಿ ಹೇಳಿಬಿಟ್ಟಿದ್ದೀನಿ ಎಂದಿದ್ದಾರೆ.

ಶಿವರಾಜ್‌ಕುಮಾರ್‌ ಅವರು ಕೂಡ ನಮಗೆ ಎಷ್ಟೋ ಸಹಾಯ ಮಾಡಿದ್ದಾರೆ. ಐದು ಸಿನಿಮಾ ಮಾಡಿದ್ದೀನಿ. ಅವರ ಉಪಕಾರವನ್ನ ನಾವು ಯಾವತ್ತೂ ಮರೆಯೋದಿಲ್ಲ. ನಿಮಗೆಲ್ಲಾ ಗೊತ್ತು ನಾನು ವಿದ್ಯಾವಂತ ಅಲ್ಲ. ಮನಸ್ಸಲ್ಲಿ ಏನಿತ್ತೋ ಅದನ್ನ ಹೇಳಿಬಿಟ್ಟಿದ್ದೀನಿ. ಶಿವಣ್ಣ ದಯವಿಟ್ಟು ನಿಮಗೆ ಕೈಮುಗಿದು ಕೇಳಿಕೊಳ್ಳುತ್ತೇನೆ - ನಿಮ್ಮ ಜೊತೆ ನಾನಿನ್ನೂ ಸಿನಿಮಾ ಮಾಡ್ಬೇಕು.

puneeth, Darshan And kanakapura srinivas
'ಗಂಡ್ಸಾಗಿದ್ರೆ ಎದುರಿಗೆ ಬಾ...': ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಜೋಗಿ ಪ್ರೇಮ್ ದೂರು!

ನಾನೇನಾದರೂ ತಪ್ಪಾಗಿ ಮಾತನಾಡಿದ್ರೆ ದಯವಿಟ್ಟು ಕ್ಷಮಿಸಿ. ನನಗೆ ಹಣದ ಅವಶ್ಯಕತೆ ಇತ್ತು. ನಿಮ್ಮೆಲ್ಲರಿಗೂ ಗೊತ್ತಿದೆ ಎರಡು ವರ್ಷದಿಂದ ಸಿನಿಮಾ ರಿಲೀಸ್‌ ಆಗಲಿಲ್ಲ. ನಮ್ಮ ಸಿನಿಮಾ ರಿಲೀಸ್‌ ಆಗಲಿ ಅಂತ ದುಃಖದಲ್ಲಿ ಹೇಳಿದ್ದೀನಿ ಎಂದರು.

ದರ್ಶನ್‌ ಅವರಿಗೆ ಹಣ ಕೇಳಿದ್ದೆ, ಸ್ವಲ್ಪ ಕಾಲಾವಕಾಶ ಕೊಡಿ ನಾನು ಕೊಡ್ತೀನಿ ಅಂತ ಹೇಳಿದ್ರು. ಅವರು ನನಗೆ ದುಡ್ಡು ಕೊಡ್ಬೇಕು ಅಂತ ಹೇಳಿದ್ದೀನಿ.‌ ನನ್ನಿಂದ ತಪ್ಪಾಗಿದೆ ದರ್ಶನ್ ಅಣ್ಣ ಎಂದರು. ದರ್ಶನ್ ಅವರು ನಮ್ಮ ಮಾಸ್ ಹೀರೋ.. ಅವರ ಜೊತೆ ಸಿನಿಮಾ ಮಾಡುತ್ತೇನೆ. ನನಗೆ ದರ್ಶನ್ ಅವರು ದುಡ್ಡು ಕೊಡಬೇಕಿತ್ತು. ʻದುಡ್ಡು ಕೊಡ್ತೀನಿ, ತಾಳ್ಮೆಯಿಂದ ಇರುʼ ಅವರು ಹೇಳಿದ್ರು.

ನಾನು ಧ್ರುವ ಸರ್ಜಾ ಜೊತೆ ಧ್ರುವ ಜೊತೆ ಮೂರು ಸಿನಿಮಾ ಮಾಡಿದ್ದೇನೆ. ಕಲಾವಿದರು ಇಲ್ಲದೇ ಸಿನಿಮಾಗಳನ್ನು ಮಾಡಲು ಸಾಧ್ಯವಿಲ್ಲ. ನಮಗೆ ಕಲಾವಿದರು ಬೇಕೇಬೇಕು. ನಮಗೆ ದಯವಿಟ್ಟು ಕಾಲ್​ಶೀಟ್ ಕೊಡಿ. ಒಳ್ಳೆಯ ಡೈರೆಕ್ಟರ್ ಕರೆದುಕೊಂಡು ಬರುತ್ತೇವೆ.

ಸಿನಿಮಾ ಮಾಡಿಕೊಡಿ. ಜೋಗಿ ಪ್ರೇಮ್, ಎ. ಪಿ. ಅರ್ಜುನ್ ಅವರು ಸಿನಿಮಾ ಮಾಡಿಕೊಡಲು ಒಪ್ಪಿಕೊಂಡಿದ್ದಾರೆ. ನನಗೆ ದುಡ್ಡು ಬೇಡ, ಸಿನಿಮಾ ಮಾಡಿಕೊಡಿ. ದಯವಿಟ್ಟು ನೀವೆಲ್ಲಾ ಸಹಕರಿಸಿ" ಎಂದಿದ್ದಾರೆ ಕನಕಪುರ ಶ್ರೀನಿವಾಸ್‌

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com