

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಗೆ ಮಣಿದ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದಕ್ಕೆ ಹಲವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲಿವರೆಗಿನ ಸುದ್ದಿಗಳಲ್ಲಿ ಇದು ಅತ್ಯುತ್ತಮ ಸುದ್ದಿ ಆಗಿದೆ. ವಿದ್ಯಾರ್ಥಿಗಳು ಹಾಗೂ ಜನರು ರಾಹುಲ್ ಗಾಂಧಿ ಹಾಗೂ ಕಾಕ್ರೊಚ್ ಜನತಾ ಪಾರ್ಟಿ ನಿಮ್ಮೆಲ್ಲರ ಶ್ರಮಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ ಎಂದು ರಮ್ಯಾ ಬರೆದಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅನ್ನುವ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು Instagram ನಲ್ಲಿ ಪೋಸ್ಟ್ ಹಾಕಿರುವ ರಮ್ಯಾ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಇದು ಇದುವರೆಗಿನ ಹರ್ಷದ ಸುದ್ದಿ ಎಂದು ಪೋಸ್ಟ್ ಮಾಡಿದ್ದಾರೆ. ಧಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ಅಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ರಮ್ಯಾ ಕೂಡ ಸಪೋರ್ಟ್ ಮಾಡಿದ್ದರು.