ಬದುಕಲು ಹಣ ಬೇಕು, ಹಣ ದುಡಿಯಲು ವೇಳೆ ಒತ್ತೆ ಇಡಬೇಕು, ಹಾಗೆ ಬಂದ ಹಣ ವ್ಯಯಿಸಿ ಉಳಿದ ವೇಳೆ ವ್ಯಯಿಸಬೇಕು? ವ್ಯಯಿಸುತ್ತ ಕ್ಷಯಿಸಿ ಹೋಗಬೇಕು. ಈ ವಿಷವರ್ತುಲ ಸೃಷ್ಟಿಯಾಗಿದೆ, ಜಗತ್ತಿನ 99 ಪ್ರತಿಶತ ಜನ ಈ ವರ್ತುಲದಲ್ಲಿ ಟ್ರ್ಯಾಪ್ ಆಗಿದ್ದಾರೆ. ಎಲ್ಲರಿಗೂ ಎತ್ತಲೂ ಓಡುವ ಧಾವಂತ, ಓಡುತ್ತಿದ್ದೇವೆ ಎನ್ನುವ ಭಾವನೆ ಆದರೆ ನಿಜವಾಗಿಯೂ ಆಗುತ್ತಿರುವುದೇನು? ಉತ್ತರ ಸಿಕ್ಕರೆ ಹಿಂದೆ ಮೋಕ್ಷ ಸಿದ್ಧಿ ಎನ್ನುತ್ತಿದರಲ್ಲ ಅದಕ್ಕೆ ಸಮ! .