ಲೋಧಾ ಸಮಿತಿ ಶಿಫಾರಸು ಅನುಷ್ಠಾನದ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷ ಶಶಾಂಕ್ ಮನೋಹರ್ ಜತೆ ಚರ್ಚಿಸುವಂತೆ ಸುಪ್ರೀಂಕೋರ್ಟ್ ಅನುರಾಗ್ ಠಾಕೂರ್ಗೆ ಆದೇಶಿಸಿತ್ತು. ಸುಪ್ರೀಂ ಆದೇಶವನ್ನು ಪಾಲಿಸಿರುವುದಾಗಿ ಠಾಕೂರ್ ಪ್ರಮಾಣ ಪತ್ರವನ್ನು ಕೋರ್ಟ್ ಗೆ ಸಲ್ಲಿಸಿದ್ದು ಒಂದು ವೇಳೆ ಅವರು ಆದೇಶವನ್ನು ಪಾಲಿಸದೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದು ಸಾಬೀತಾದರೆ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ.