ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೇಳಿದ ಮುಶ್ಫಿಕರ್ ರಹೀಮ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆಯಲ್ಲಿ ಸೋಲಿನ ಬಳಿಕ ಮುಜಗರಕ್ಕೊಳಗಾಗಿದ್ದ...
ಬಾಂಗ್ಲಾ ಕ್ರಿಕೆಟಿಗ ಮುಶ್ಫಿಕರ್ ರಹೀಮ್ (ಸಂಗ್ರಹ ಚಿತ್ರ)
ಬಾಂಗ್ಲಾ ಕ್ರಿಕೆಟಿಗ ಮುಶ್ಫಿಕರ್ ರಹೀಮ್ (ಸಂಗ್ರಹ ಚಿತ್ರ)

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆಯಲ್ಲಿ ಸೋಲಿನ ಬಳಿಕ ಮುಜಗರಕ್ಕೊಳಗಾಗಿದ್ದ  ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿರುವ ಮುಶ್ಫಿಕರ್ ಭಾರತದ ಎದುರು ಬಾಂಗ್ಲಾದೇಶದ ಸೋಲಿಗೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದಾರೆ.  ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 147 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್ ಗಳಲ್ಲಿ 146 ರನ್  ಗಳಿಸಿ 1 ಅಂತರದಿಂದ ರೋಚಕ ಸೋಲು ಕಂಡಿತ್ತು.

ಪಂದ್ಯದ ಅಂತಿಮ ಓವರ್ ನಲ್ಲಿ ಸತತ 2 ಬೌಂಡರಿ ಸಿಡಿಸಿ ಬಾಂಗ್ಲಾ ತಂಡವನ್ನು ಬಹುತೇಕ ಗೆಲುವಿನ ಸನಿಹಕ್ಕೆ ತಂದಿದ್ದ ಮುಶ್ಫಿಕರ್ ರಹೀಮ್ ಆಗಲೇ ಗೆಲುವಿನ ಸಂಭ್ರಮಾಚರಣೆ  ಮಾಡಿದ್ದರು. ಆದರೆ ನಾಲ್ಕನೇ ಎಸೆತದಲ್ಲಿ ಅನಗತ್ಯ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲುವ ಮೂಲಕ ಬಾಂಗ್ಲಾದೇಶದ ಸೋಲಿಗೆ ಪರೋಕ್ಷ ಕಾರಣರಾಗಿದ್ದರು. ಇದೀಗ ತಮ್ಮ ತಪ್ಪಿನ ಅರಿವಾಗಿ  ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com