ರಾಹುಲ್ ದ್ರಾವಿಡ್ ಅಂಧರ ಟಿ20 ವಿಶ್ವಕಪ್ ರಾಯಭಾರಿ

2016ರ ನವೆಂಬರ್ ನಲ್ಲಿ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್..
ರಾಹುಲ್ ಡ್ರಾವಿಡ್
ರಾಹುಲ್ ಡ್ರಾವಿಡ್
Updated on

ಬೆಂಗಳೂರು: 2016ರ ನವೆಂಬರ್ ನಲ್ಲಿ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ರಾಯಭಾರಿಯಾಗಿ ನೇಮಕವಾಗಿದ್ದಾರೆ.

2016ರ ನವೆಂಬರ್ 26 ರಿಂದ ಡಿಸೆಂಬರ್ 11ರವರೆಗೆ ಭಾರತದ ಪ್ರಮುಖ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ. ಈ ಕೂಟಕ್ಕೆ ರಾಯಭಾರಿಯಾಗುವಂತೆ ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ ಮನವಿ ಮಾಡಿಕೊಂಡಿತ್ತು. ಇದಕ್ಕೆ ರಾಹುಲ್ ಡ್ರಾವಿಡ್ ಸಕಾರಾತ್ಮಕವಾಗಿ ಸ್ಪಂದಿಸಿ ಒಪ್ಪಿಗೆ ಸೂಚಿಸಿದ್ದಾರೆ.

ಪ್ರಸಕ್ತ ಭಾರತದಲ್ಲಿ ಪುರುಷರ ಹಾಗೂ ಮಹಿಳೆಯ ಟಿ20 ವಿಶ್ವಕಪ್ ನಡೆಯುತ್ತಿದ್ದು, ಎರಡು ಕೂಟಗಳು ಫೈನಲ್ ಹಂತಕ್ಕೆ ಬಂದು ನಿಂತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com