ವಡೋದರ: ದೆಹಲಿ ಹಾಗೂ ಅಸ್ಸಾಂ ವಿರುದ್ಧ ಭರ್ಜರಿ ಜಯಗಳಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಕರ್ನಾಟಕ ತಂಡ ವಿದರ್ಭ ವಿರುದ್ಧ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡುವ ಹಂಬಲದಲ್ಲಿದೆ.
ರಣಜಿ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ಆರಂಭ ಕಂಡಿರುವ ಕರ್ನಾಟಕ ತಂಡ ಇಂದು ವಿದರ್ಭ ವಿರುದ್ಧ ಸೆಣಸಲಿದೆ. 8 ಬಾರಿ ರಣಜಿ ಚಾಂಪಿಯನ್ ಆಗಿರುವ ಕರ್ನಾಟಕ ತಂಡ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಟೂರ್ನಿಯಲ್ಲಿ ಆಡಿರುವ ಮೂರು ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಜಯಗಳಿಸಿ ಮತ್ತೊಂದು ಪಂದ್ಯದಲ್ಲಿ ಡ್ರಾ ಸಾಧಿಸಿರುವ ಕರ್ನಾಟಕ ತಂಡ 17 ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.
ವಿದರ್ಭ ಕರ್ನಾಟಕ ತಂಡಗಳ ನಡುವಿನ ಪಂದ್ಯ ಮೋತಿಬಾಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ವಿಜಯ್ ಕುಮಾರ್ ಸಾರಥ್ಯದಲ್ಲಿ ತಂಡ ಟೂರ್ನಿಯಲ್ಲಿ ಇದುವರೆಗೂ ಸ್ಥಿರ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ.
Advertisement