ಕಾಳಧನದ ವಿರುದ್ಧ ದಿಟ್ಟ ನಿರ್ಧಾರ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಭ್ರಷ್ಟಾಚಾರ, ಕಪ್ಪುಹಣ ಹಾಗೂ ನಕಲಿ ನೋಟುಗಳ ಹಾವಳಿಯನ್ನು ತಡೆಗಟ್ಟುವ ಸಲುವಾಗಿ 500-1000 ರುಪಾಯಿ ಮುಖಬೆಲೆಯ ನೋಟುಗಳನ್ನು ಇಂದಿನ ಮಧ್ಯರಾತ್ರಿಯಿಂದಲೇ ಚಲಾವಣೆ ಬಂದ್ ಆಗಲಿದೆ ಎಂದು ಹೇಳಿದ್ದರು.