ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಬೌಲರ್ ನುವಾನ್ ಕುಲಶೇಖರ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಬೌಲರ್ ನುವಾನ್ ಕುಲಶೇಖರ ರಸ್ತೆ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಕುಲಶೇಖರ ಅವರನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಿದ್ದಾರೆ.
ಬಸ್ವೊಂದನ್ನು ಓವರ್ಟೇಕ್ ಮಾಡುತ್ತಿದ್ದ ಮೋಟರ್ ಸೈಕಲ್ ರೈಡರ್ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದರು. ಈ ವೇಳೆ ಕುಲಶೇಖರ ಅವರಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತದಲ್ಲಿ 28 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
Advertisement