ಮಂಗಳೂರು ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಬೆಳಗಾವಿ ಪ್ಯಾಂಥರ್ಸ್

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯ ಟೂರ್ನಿಯಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಮಣಿಸಿ ಬೆಳಗಾವಿ ಪ್ಯಾಂಥರ್ಸ್ ತಂಡ...
ಮಯಾಂಕ್ ಅಗರ್ವಾಲ್
ಮಯಾಂಕ್ ಅಗರ್ವಾಲ್

ಹುಬ್ಬಳ್ಳಿ: ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) 5ನೇ ಆವೃತ್ತಿಯ ಟೂರ್ನಿಯಲ್ಲಿ ಮಂಗಳೂರು ಯುನೈಟೆಡ್ ತಂಡವನ್ನು ಮಣಿಸಿ ಬೆಳಗಾವಿ ಪ್ಯಾಂಥರ್ಸ್ ತಂಡ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿದೆ.

ರಾಜನಗರ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಬೆಳಗಾವಿ 5 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಮಂಗಳೂರು 14.1 ಓವರ್ ಗಳಲ್ಲಿ 138 ರನ್ ಗಳೆ ಆಲೌಟ್ ಆಯಿತು. ಇದರೊಂದಿಗೆ ಬೆಳಗಾವಿ 39 ರನ್ ಗಳಿಂದ ಜಯ ಗಳಿಸಿ ಸೆಮಿಫೈನಲ್ ಹಾದಿ ಸುಗಮಗೊಳಿಸಿಕೊಂಡಿತು.

ಬೆಳಗಾವಿ ಪ್ಯಾಂಥರ್ಸ್ ಪರ ಮಯಾಂಕ್ ಅಗರ್ವಾಲ್ ಅವರ ಭರ್ಜರಿ 119 ರನ್ ಗಳ ನೆರವಿನಿಂದ ಬೆಳಗಾವಿ ತಂಡ ಸೆಮಿಫೈನಲ್ ಗೇರಲು ಸಾಧ್ಯವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com