ರಾಬಿನ್ ಉತ್ತಪ್ಪ ಸೆಳೆಯಲು ಕೇರಳ ಕ್ರಿಕೆಟ್ ಸಂಸ್ಥೆ ಪ್ರಯತ್ನ!

ಕನ್ನಡಿಗ ರಾಬಿನ್ ಉತ್ತಪ್ಪ ಕರ್ನಾಟಕ ರಣಜಿ ತಂಡದ ಹಿರಿಯ ಬ್ಯಾಟ್ಸ್ ಮನ್. ಇಂತಹ ಆಟಗಾರನನ್ನು ತಮ್ಮ ತಂಡದ ಪರ ಆಡಲು ಕೇರಳ ಕ್ರಿಕೆಟ್ ಸಂಸ್ಥೆ ಸೆಳೆಯಲು ಪ್ರಯತ್ನ...
ರಾಬಿನ್ ಉತ್ತಪ್ಪ
ರಾಬಿನ್ ಉತ್ತಪ್ಪ
Updated on
ಕನ್ನಡಿಗ ರಾಬಿನ್ ಉತ್ತಪ್ಪ ಕರ್ನಾಟಕ ರಣಜಿ ತಂಡದ ಹಿರಿಯ ಬ್ಯಾಟ್ಸ್ ಮನ್. ಇಂತಹ ಆಟಗಾರನನ್ನು ತಮ್ಮ ತಂಡದ ಪರ ಆಡಲು ಕೇರಳ ಕ್ರಿಕೆಟ್ ಸಂಸ್ಥೆ ಸೆಳೆಯಲು ಪ್ರಯತ್ನ ನಡೆಸಿದೆ. 
2017-18ರ ಸಾಲಿನ ರಣಜಿ ಟ್ರೋಫಿಗೆ ತಮ್ಮ ತಂಡದ ಪರ ಆಡಲು ಸೆಳೆಯಲು ಪ್ರಯತ್ನ ನಡೆಸಿದ್ದೇವೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಮಾಹಿತಿ ನೀಡಿದೆ. ಕಳೆದ ವರ್ಷವೇ ಉತ್ತಪ್ಪ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈ ಬಾರಿ ಮತ್ತೊಮ್ಮೆ ಅವರನ್ನು ನಮ್ಮ ತಂಡದ ಪರ ಆಡಲು ಕೇಳಿದ್ದೇವೆ ಎಂದು ಕ್ರಿಕೆಟ್ ಸಂಸ್ಥೆ ಹೇಳಿದೆ. 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಕ್ರಿಕೆಟ್ ಸಂಸ್ಥೆ ವಕ್ತಾರ ವಿನಯ್ ಮೃತ್ಯಂಜಯ ಅವರು ಇದೆಲ್ಲಾ ಕೇವಲ ವದಂತಿ. ರಾಬಿನ್ ಕರ್ನಾಟಕ ತಂಡ ಬಿಟ್ಟು ಬೇರೆ ಯಾವ ತಂಡಕ್ಕೂ ಹೋಗುವುದಿಲ್ಲ ಎಂದು ಪತ್ರಿಕೆಯೊಂದಕ್ಕೆ ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com