ನವದೆಹಲಿ: ಸ್ಪಾಟ್ ಫಿಕ್ಸಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇಲೆ ಜೀವಮಾನ ನಿಷೇಧಕ್ಕೆ ಗುರಿಯಾಗಿದ್ದ ಕ್ರಿಕೆಟರ್ ಶ್ರೀಶಾಂತ್ ಮೇಲಿನ ನಿಷೇಧವನ್ನು ಕೇರಳ ಹೈಕೋರ್ಟ್ ತೆರವುಗೊಳಿಸಿದ ಬೆನ್ನಲ್ಲೇ, ನಾನು 2019ರ ವಿಶ್ವಕಪ್ ಕ್ರಿಕೆಟ್ ಮೇಲೆ ಕಣ್ಣಿಟ್ಟಿದ್ದು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದೇ ಈಗ ನನ್ನ ಕ್ರಿಕೆಟ್ ಬದುಕಿನ ಮಹದಾಸೆ ಎಂದು ಹೇಳಿದ್ದಾರೆ.