ಸುದ್ದಿ ಸಂಸ್ಥೆಯೊಂದರ ಸಂದರ್ಶನದ ವೇಳೆ ಮಾತನಾಡಿದ ವೀರೇಂದ್ರ ಸೆಹ್ವಾಗ್, ರಿಷಭ್ ಪಂತ್ ಕೂಡ ವಿಕೆಟ್ ಕೀಪರ್ ಆಗಿದ್ದು ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಧೋನಿ ಸ್ಥಾನವನ್ನು ತುಂಬುವಂಥ ಸಾಮರ್ಥ್ಯ ತೋರಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕು. ಆದ್ದರಿಂದ 2019ರ ವಿಶ್ವಕಪ್ ನಂತರವಷ್ಟೇ ಈ ಕುರಿತು ಚಿಂತನೆ ನಡೆಸಬಹುದು ಎಂದು ಹೇಳಿದ್ದಾರೆ.