ಶ್ರೀಲಂಕಾ ಕ್ರಿಕೆಟ್ ಅವ್ಯವಸ್ಥೆ ಎದುರಿಸುತ್ತಿದ್ದು, ರಾಷ್ಟ್ರೀಯ ತಂಡ ಈಗಾಗಲೇ 21 ಏಕದಿನ ಪಂದ್ಯಗಳನ್ನು ಸೋತಿದ್ದು ಕೇವಲ 4 ರಲ್ಲಿಗೆದ್ದಿದೆ, ತಂಡದ ಆಯ್ಕೆಗೆ ಅಧಿಕೃತವಾಗಿ ತಾವು ಒಪ್ಪಿಗೆ ಸೂಚಿಸುವ ಮುನ್ನವೇ ಕ್ರಿಕೆಟಿಗರು ಭಾರತಕ್ಕೆ ಹೊರಟಿದ್ದರಿಂದ ಆಕ್ರೋಶಗೊಂಡಿರುವ ಕ್ರೀಡಾ ಸಚಿವರು ಕ್ರಿಕೆಟಿಗರನ್ನು ವಾಪಸ್ ಕರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.