ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಪ್ರಥಮ ಏಕದಿನ ಪಂದ್ಯದಲ್ಲಿ ಭಾರತ 38.2 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಎದುರಾಳಿ ತಂಡಕ್ಕೆ 112 ರನ್ ಗಳ ಸುಲಭದ ಗುರಿ ನೀಡಿದೆ.
ಧರ್ಮಶಾಲಾ: ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಪ್ರಥಮ ಏಕದಿನ ಪಂದ್ಯದಲ್ಲಿ ಭಾರತ 38.2 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಎದುರಾಳಿ ತಂಡಕ್ಕೆ 112 ರನ್ ಗಳ ಸುಲಭದ ಗುರಿ ನೀಡಿದೆ.
ಲಂಕಾ ಮಾರಕ ಬೌಲಿಂಗ್ ಗೆ ತತ್ತರಿಸಿದ ಆರಂಭಿಕ ಆಟಗಾರರು ಕನಿಷ್ಠ 2 ಅಂಕಿಯ ರನ್ ಗಳನ್ನೂ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಮಹೇಂದ್ರ ಸಿಂಗ್ ಧೋನಿ ಲಂಕಾ ಆಟಗಾರರನ್ನು ಏಕಾಂಗಿಯಾಗಿ ಎದುರಿಸಿ 87 ಎಸೆತಗಳಲ್ಲಿ 65 ರನ್ ಗಳಿಸಿದರು.