ಕಾರು ಅಪಘಾತ: ಕ್ರಿಕೆಟಿಗ ಅಜಿಂಕ್ಯ ರೆಹಾನೆ ತಂದೆ ಬಂಧನ

ಭಾರತ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರೆಹಾನೆ ಅವರ ತಂದೆ ಮಧುಕರ್ ಬಾಬುರಾವ್ ಅವರನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ.
ಅಜಿಂಕ್ಯ ರೆಹಾನೆ
ಅಜಿಂಕ್ಯ ರೆಹಾನೆ
Updated on
ಭಾರತ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರೆಹಾನೆ ಅವರ ತಂದೆ ಮಧುಕರ್ ಬಾಬುರಾವ್ ಅವರನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. 
ಐ20 ಕಾರನ್ನು ಚಾಲನೆ ಮಾಡುತ್ತಿದ್ದ ಮಧುಕರ್ ಬಾಬುರಾವ್, 67 ವರ್ಷದ ವೃದ್ಧೆಗೆ ಡಿಕ್ಕಿ ಹೊಡೆದಿದ್ದು, ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ತಕ್ಷಣವೇ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ರೆಹಾನೆ ತಂದೆಯ ವಿರುದ್ಧ ಅಜಾಗರೂಕ ಚಾಲನೆಯಿಂದ ಸಾವು ಸಂಭವಿಸುವಂತೆ ಮಾಡಿರುವ ಆರೋಪದ ಅಡಿಯಲ್ಲಿ ಐಪಿಸಿ ಕಾಯ್ದೆ 304ಎ, 337, 338, 279 ಹಾಗೂ 184 ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. 
ರೆಹಾನೆ ತಂದೆಯವರ ಕಾರು ಅಪಘಾತಕ್ಕೀಡಾದಾಗ ಯಾರು ಕಾರನ್ನು ಚಾಲನೆ ಮಾಡುತ್ತಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಜಿಂಕ್ಯ ರೆಹಾನೆ ರಜೆಯಲ್ಲಿದ್ದು, ಅವರ ಕುಟುಂಬ ಸದಸ್ಯರು ಕೊಂಕಣಕ್ಕೆ ತೆರಳುತ್ತಿದ್ದಾಗ ಈ ಅಘಪಾತ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com