ಭಾರತಕ್ಕೆ ಅಂಧರ ಟಿ20 ವಿಶ್ವಕಪ್: ಸರ್ಕಾರದಿಂದ ರಾಜ್ಯದ ಆಟಗಾರರಿಗೆ ತಲಾ 7 ಲಕ್ಷ ಬಹುಮಾನ

ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿ ಸತತ ಎರಡನೇ ಬಾರಿಗೆ ವಿಶ್ವಕಪ್ ಕಿರೀಟ...
ಪ್ರಕಾಶ್ ಜಯರಾಮಯ್ಯ
ಪ್ರಕಾಶ್ ಜಯರಾಮಯ್ಯ
Updated on
ಬೆಂಗಳೂರು: ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿ ಸತತ ಎರಡನೇ ಬಾರಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದು, ವಿಶ್ವಕಪ್ ತಂಡದಲ್ಲಿದ್ದ ಕರ್ನಾಟಕದ ಇಬ್ಬರು ಆಟಗಾರರಿಗೆ ರಾಜ್ಯ ಸರ್ಕಾರ ತಲಾ 7 ಲಕ್ಷ ಬಹುಮಾನ ಘೋಷಿಸಿದೆ. 
ಕರ್ನಾಟಕದವರಾದ ಪ್ರಕಾಶ್ ಜಯರಾಮಯ್ಯ ಮತ್ತು ಸುನೀಲ್ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಬ್ಬರಿಗೂ ತಲಾ 7 ಲಕ್ಷ ರುಪಾಯಿ ಬಹುಮಾನ ಮತ್ತು ಸರ್ಕಾರಿ ಉದ್ಯೋಗದ ಭರವಸೆಯನ್ನು ಸರ್ಕಾರ ನೀಡಿದೆ.
ನಿನ್ನೆ ಬೆಂಗಳೂರಿನ ಯವನಿಕಾದಲ್ಲಿ ಸತತ 2ನೇ ಬಾರಿಗೆ ಅಂಧರ ಟಿ20 ವಿಶ್ವಕಪ್ ಜಯಿಸಿದ ಭಾರತ ತಂಡವನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಭಿನಂದಿಸಿದರು. 
ಪ್ರಕಾಶ್ ಜಯರಾಮಯ್ಯ ಟೀಂ ಇಂಡಿಯಾ ಪರವಾಗಿ ಆಡುತ್ತಿದ್ದು ಅವರು ಇದುವರೆಗೂ 37 ಶತಕ ಒಳಗೊಂಡಂತೆ 10 ಸಾವಿರಕ್ಕೂ ಅಧಿಕ ರನ್ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com