ಏಕದಿನ ಸರಣಿಯಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದ ಯುವರಾಜ್ ಸಿಂಗ್ (12) ಮತ್ತು ಕನ್ನಡಿಗ ಮನೀಶ್ ಪಾಂಡೆ (3), ಹಾರ್ದಿಕ್ ಪಾಂಡ್ಯ (9), ಕೂಡ ನಿರೀಕ್ಷೆಯ ಆಟ ಪ್ರದರ್ಶಿಸಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (36*) ತಂಡದ ಮೊತ್ತವನ್ನು ಏರಿಸುವಲ್ಲಿ ಏಕಾಂಗಿ ಹೋರಾಟ ನಡೆಸಿದರು. ಕಡೆಯ ಓವರ್ಗಳಲ್ಲಿ ಧೋನಿಗೆ ಸಾಥ್ ನೀಡಿದ ಪರ್ವೆಜ್ ರಸೂಲ್ (5) ರನ್ ಗಳಿಸಿದರು. ರಸೂಲ್ ಈ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಟ್ವಿಂಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು.