ರವಿಶಾಸ್ತ್ರಿಗೆ ಮಣಿದು ಭರತ್ ಅರುಣ್‌ರನ್ನು ಭಾರತದ ಬೌಲಿಂಗ್ ಕೋಚ್ ಮಾಡಿದ ಬಿಸಿಸಿಐ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ರವಿಶಾಸ್ತ್ರಿಗೆ ಮಣಿಸಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭರತ್ ಅರುಣ್‌ರನ್ನು...
ಭರತ್ ಅರುಣ್-ರವಿಶಾಸ್ತ್ರಿ
ಭರತ್ ಅರುಣ್-ರವಿಶಾಸ್ತ್ರಿ
Updated on
ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಗೊಂಡಿರುವ ರವಿಶಾಸ್ತ್ರಿಗೆ ಮಣಿಸಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭರತ್ ಅರುಣ್‌ರನ್ನು ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿದೆ. 
ಇದಕ್ಕೂ ಮುನ್ನ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್ ಖಾನ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ರಾಹುಲ್ ದ್ರಾವಿಡ್ ರನ್ನು ನೇಮಕ ಮಾಡಿತ್ತು. ಇದಕ್ಕೆ ರವಿಶಾಸ್ತ್ರಿ ವಿರೋಧಿಸಿದ್ದರು. ಅಲ್ಲದೆ ಜಹೀರ್ ಖಾನ್ ಬದಲಿಗೆ ಭರತ್ ಅರುಣ್‌ರನ್ನು ಬೌಲಿಂಗ್ ಕೋಚ್ ಆಗಿ ಮಾಡಬೇಕೆಂದು ಒತ್ತಾಯ ಮಾಡಿದ್ದರು. ಇದಕ್ಕೆ ಬಿಸಿಸಿಐ ಮಣಿದಿದೆ. 
ಈ ಹಿಂದೆ ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಆಗಿದ್ದ ಸಂಜಯ್ ಬಂಗಾರ್ ಅವರನ್ನು ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದ್ದು ಆರ್ ಶ್ರೀಧರ್ ರನ್ನು ಫೀಲ್ಡಿಂಗ್ ಕೋಚ್ ಆಗಿ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com