ಹಿರಿಯರ ತಂಡದೊಂದಿಗೆ ರಾಹುಲ್ ದ್ರಾವಿಡ್ ಪ್ರವಾಸ ಕೈಗೊಳ್ಳುವುದಿಲ್ಲ: ವಿನೋದ್ ರೈ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಹಿರಿಯರ ತಂಡದೊಂದಿಗೆ ವಿದೇಶ ಪ್ರವಾಸಕ್ಕೆ ತೆರಳುವುದಿಲ್ಲ....
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್
Updated on
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಹಿರಿಯರ ತಂಡದೊಂದಿಗೆ ವಿದೇಶ ಪ್ರವಾಸಕ್ಕೆ ತೆರಳುವುದಿಲ್ಲ ಎಂದು ಬಿಸಿಸಿಐ ಆಡಳಿತಗಾರರ ಸಮಿತಿ(ಸಿಒಎ) ಮುಖ್ಯಸ್ಥ ವಿನೋದ್ ರೈ ಅವರು ಶನಿವಾರ ಹೇಳಿದ್ದಾರೆ.
ರಾಹುಲ್ ದ್ರಾವಿಡ್ ಅವರು ಅಂಡರ್-19 ತಂಡದ ಪ್ರಧಾನ ಕೋಚ್ ಆಗಿರುವುದರಿಂದ ಕಿರಿಯರ ತಂಡದೊಂದಿಗಿರಲಿದ್ದಾರೆ ಎಂದು ರೈ ತಿಳಿಸಿದ್ದಾರೆ. ಅಲ್ಲದೆ ಟೀಂ ಇಂಡಿಯಾ ಬೌಲಿಂಗ್ ಸಲಹೆಗಾರರಾಗಿದ್ದ ಜಹೀರ್ ಖಾನ್ ಅವರ ಒಪ್ಪಂದ ವಿವಾದ ಪರಿಹರಿಸುವ ಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ. 
ರಾಹುಲ್ ದ್ರಾವಿಡ್ ಅವರು ಅಂಡರ್-19 ತಂಡಕ್ಕೆ ಎರಡು ವರ್ಷಗಳ ಪೂರ್ಣಾವಧಿ ಒಪ್ಪಂದ ಮಾಡಿಕೊಂಡಿದ್ದು, ಹಿರಿಯ ತಂಡದ ವಿದೇಶ ಪ್ರವಾಸಕ್ಕೆ ಅವರು ಲಭ್ಯವಿರುವುದಿಲ್ಲ ಎಂದು ರೈ ಸ್ಪಷ್ಟಪಡಿಸಿದ್ದಾರೆ.
ಬಿಸಿಸಿಐ ಈ ನಿರ್ಧಾರದಿಂದಾಗಿ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿಯಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com