ಭಾರತದ ವಿರುದ್ಧ ಉನ್ನತ ಮಟ್ಟದ ಕ್ರೀಡಾ ಉತ್ಸಾಹ ಪ್ರದರ್ಶಿಸಿ: ಪಿಸಿಬಿ ಮುಖ್ಯಸ್ಥ

ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ನಾಳೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು,...
ಶಹರ್ಯಾರ್ ಖಾನ್
ಶಹರ್ಯಾರ್ ಖಾನ್
Updated on
ಬರ್ಮಿಂಗ್ಹ್ಯಾಮ್:  ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ನಾಳೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ಟೀಂ ಇಂಡಿಯಾ ವಿರುದ್ಧ ಉನ್ನತ ಮಟ್ಟದ ಕ್ರೀಡಾ ಉತ್ಸಾಹ ಪ್ರದರ್ಶಿಸಿ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಮುಖ್ಯಸ್ಥ ಶಹರ್ಯಾರ್ ಖಾನ್ ಅವರು ಹಸಿರು ಬ್ರಿಗೇಡ್ ಗೆ ಶನಿವಾರ ಸಲಹೆ ನೀಡಿದ್ದಾರೆ.
ಇಂದು ಬರ್ಮಿಂಗ್ಹ್ಯಾಮ್ ನಲ್ಲಿ ಪಾಕಿಸ್ತಾನದ ಆಟಗಾರರನ್ನು ಭೇಟಿ ಮಾಡಿದ ಖಾನ್, ಭಾರತೀಯ ಆಟಗಾರರನ್ನು ಅತ್ಯಂತ ವಿಶ್ವಾಸದಿಂದ ಮತ್ತು ಒಗ್ಗಟ್ಟಿನಿಂದ ಎದುರಿಸುವಂತೆ ಸೂಚಿಸಿದ್ದಾರೆ.
ಭಾರತ-ಪಾಕಿಸ್ತಾನ ನಡುವೆ ದೊಡ್ಡ ಸ್ಪರ್ಧೆ ನಡೆಯುತ್ತದೆ. ಹೀಗಾಗಿ ಪಾಕ್ ಆಟಗಾರರು ಉನ್ನತ ಮಟ್ಟದ ಕ್ರೀಡಾ ಉತ್ಸಾಹ ಪ್ರದರ್ಶಿಸಬೇಕು ಎಂದು ಪಿಸಿಬಿ ಮುಖ್ಯಸ್ಥರು ಹೇಳಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com