ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದ ಎರಡನೇ ದಿನದಾಟಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿದ್ದು ಮುನ್ನಡೆ ಪಡೆಯಲು ಇನ್ನು 331 ರನ್ ಗಳಿಸಬೇಕಿದೆ. ಭಾರತ ಪರ ಕೆಎಲ್ ರಾಹುಲ್ 67, ಆಕರ್ಷಕ ಅರ್ಧ ಶತಕ ಸಿಡಿಸಿ ಔಟಾಗಿದ್ದಾರೆ. ಇನ್ನು ಆರಂಭಿಕ ಆಟಗಾರ ಮುರುಳಿ ವಿಜಯ್ ಅಜೇಯ 42 ಮತ್ತು ಚೇತೇಶ್ವರ ಪೂಜಾರ ಅಜೇಯ 10 ರನ್ ಗಳಿಸಿದ್ದು ಮೂರನೇ ದಿನದಾಟ ಪ್ರಾರಂಭಿಸಲಿದ್ದಾರೆ.