ಭಾರತ ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ದೊಡ್ಡ ನಷ್ಟ: ಆಮ್ಲಾ, ಮಿಲ್ಲರ್

ಮುಂದಿನ ತಿಂಗಳು ಇಂಗ್ಲೆಂಡ್‌ ನಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸದಿದ್ದರೆ....
ಡೇವಿಡ್ ಮಿಲ್ಲರ್
ಡೇವಿಡ್ ಮಿಲ್ಲರ್
Updated on
ಬೆಂಗಳೂರು: ಮುಂದಿನ ತಿಂಗಳು ಇಂಗ್ಲೆಂಡ್‌ ನಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡ ಭಾಗವಹಿಸದಿದ್ದರೆ ದೊಡ್ಡ ನಷ್ಟ ಅನುಭವಿಸಿದಂತೆ ಎಂದು ದಕ್ಷಿಣ ಆಫ್ರಿಕಾದ ಆಟಗಾರರಾದ ಹಾಶೀಂ ಆಮ್ಲಾ ಹಾಗೂ ಡೇವಿಡ್‌ ಮಿಲ್ಲರ್‌ ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಶ್ವದಾದ್ಯಂತ ಭಾರತ ಕ್ರಿಕೆಟ್‌ ಅಭಿಮಾನಿಗಳನ್ನು ಹೊಂದಿದ್ದು, ಒಂದು ವೇಳೆ ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾಗವಹಿಸದಿದ್ದರೆ ಅಭಿಮಾನಿಗಳಿಗೆ ತುಂಬಾ ನಿರಾಸೆಯಾಗಲಿದೆ ಎಂದು ಡೇವಿಡ್‌ ಮಿಲ್ಲರ್‌ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ರೋಮಾಂಚಕಾರಿ ಚಾಂಪಿಯನ್ಸ್ ಟ್ರೋಫಿಯನ್ನು ನೋಡಲು ಬಯಸುವುದಾದರೆ ವಿಶ್ವದ ಎಲ್ಲಾ ಎಂಟು ತಂಡಗಳು ಟೂರ್ನಿಯಲ್ಲಿ ಭಾಗವಹಿಸಬೇಕು. ಒಂದು ವೇಳೆ ಭಾರತ ಭಾಗವಹಿಸದಿದ್ದರೆ ಅಭಿಮಾನಿಗಳು ದೊಡ್ಡ ನಷ್ಟ ಅನುಭವಿಸಲಿದ್ದಾರೆ ಎಂದು ಹಾಶೀಂ ಆಮ್ಲಾ ಅವರು ಹೇಳಿದ್ದಾರೆ.
ಜೂನ್ 1ರಿಂದ ಆರಂಭವಾಗುತ್ತಿರುವ ಚಾಂಪಿಯನ್ಸ್ ಟ್ರೋಫಿಗೆ ಬಿಸಿಸಿಐ ಭಾರತದ ಆಟಗಾರರನ್ನು ಆಯ್ಕೆ ಮಾಡಿ ಏಪ್ರಿಲ್‌ 25ರಂದು ತಂಡವನ್ನು ಪ್ರಕಟಿಸಬೇಕಿತ್ತು. ಆದರೆ, ಐಸಿಸಿಯ ನೂತನ ಆದಾಯ ಹಂಚಿಕೆ ನೀತಿಯನ್ನು ವಿರೋಧಿಸಿದ್ದ ಬಿಸಿಸಿಐ ಪ್ರತಿಭಟನೆ ವ್ಯಕ್ತಪಡಿಸುವ ಉದ್ದೇಶದಿಂದ ಈ ವರೆಗೆ ತಂಡವನ್ನು ಪ್ರಕಟಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com