ರಣಜಿ ಸಂಭಾವನೆ ವಿಚಾರ: ಕೋಚ್ ಅನಿಲ್ ಕುಂಬ್ಳೆಗೆ ಭಜ್ಜಿ ಪತ್ರ!

ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ದೇಶೀ ಕ್ರಿಕೆಟಿಗರ ಪರ ಬ್ಯಾಟ್ ಬೀಸಿದ್ದು, ರಣಜಿ ಆಟಗಾರರ ಸಂಭಾವನೆ ಹೆಚ್ಚಿಸುವಂತೆ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ದೇಶೀ ಕ್ರಿಕೆಟಿಗರ ಪರ ಬ್ಯಾಟ್ ಬೀಸಿದ್ದು, ರಣಜಿ ಆಟಗಾರರ ಸಂಭಾವನೆ ಹೆಚ್ಚಿಸುವಂತೆ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಮೂಲಗಳ ಪ್ರಕಾರ ಇದೇ ಮೇ 21ರಂದು ಸಿಒಎ ಅಧಿಕಾರಿಗಳೊಂದಿಗೆ ಅನಿಲ್ ಕುಂಬ್ಳೆ ಚರ್ಚೆ ನಡೆಸಲಿದ್ದು, ಕ್ರಿಕೆಟ್ ಆಟಗಾರರ ಸಂಭಾವನೆ ಕುರಿತು ಚರ್ಚಿಸಲಿದ್ದಾರೆ. ಇದೇ ಕಾರಣಕ್ಕೆ ಭಜ್ಜಿ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಪತ್ರ  ಬರೆದಿದ್ದು, ದೇಶೀ ಕ್ರಿಕೆಟಿಗರ ಸಂಭಾವನೆ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆಗೆ ದೇಶೀ ಕ್ರಿಕೆಟಿಗರ ಹಣಕಾಸಿನ ಸಮಸ್ಯೆಯ ಬಗ್ಗೆ ಬಿಸಿಸಿಐ ಗಮನಕ್ಕೆ ತರುವಂತೆ ಭಜ್ಜಿ  ಪತ್ರ ಬರೆದಿದ್ದು, ಮೇ 21 ರಂದು ಕುಂಬ್ಳೆ ಬಿಸಿಸಿಐನ ಆಡಳಿತಾಧಿಕಾರಿಗಳ ಎದುರು ಸಂಭಾವನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಷಯ ಮಂಡಿಸಲಿದ್ದಾರೆ.

"ದೇಶೀಯ ಮಟ್ಟದ ಕ್ರಿಕೆಟ್ ಪಂದ್ಯಗಳಲ್ಲಿ ಆಡುವ ಆಟಗಾರರಿಗೆ ಕೇವಲ 1.5 ಲಕ್ಷ ರೂ. ಸಂಭಾವನೆ ಸಿಗುತ್ತಿದ್ದು, ಕಳೆದ ಎರಡು ಮೂರು ವರ್ಷಗಳಿಂದ ರಣಜಿ ಆಡುವವನಾಗಿ ನನ್ನ ಸಹ ಆಟಗಾರರು ಹಣಕಾಸಿನ ವಿಚಾರಕ್ಕೆ  ಪರದಾಡುವುದನ್ನು ನೋಡಿದ್ದೇನೆ. ದಯಮಾಡಿ ಇವರ ಸಮಸ್ಯೆಯತ್ತ ಬಿಸಿಸಿಐ ಗಮನಹರಿಸುವಂತೆ ಮಾಡಿ’ ಎಂದು ಭಜಿ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com