ಬಲಿಷ್ಠರಾಗಿ ಮತ್ತೆ ಮೈದಾನಕ್ಕೆ ಕಾಲಿಡುತ್ತೇವೆ: ವಿರಾಟ್ ಕೊಹ್ಲಿ ಭರವಸೆ

2017 ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳಪೆ ಪ್ರದರ್ಶನ ನೀಡಿ ಹೊರಬಿದ್ದಿರುವುದಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿಯವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದು...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ನವದೆಹಲಿ: 2017 ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳಪೆ ಪ್ರದರ್ಶನ ನೀಡಿ ಹೊರಬಿದ್ದಿರುವುದಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿಯವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಬಲಿಷ್ಠರಾಗಿ ಮತ್ತೆ ಮೈದಾನಕ್ಕೆ ಕಾಲಿಡುತ್ತೇವೆಂದು ಗುರುವಾರ ಭರವಸೆ ನೀಡಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೊಹ್ಲಿ, ಪ್ರಸಕ್ತ ಸಾರಿನ ಐಪಿಎಲ್ ಲೀಗ್'ನಲ್ಲಿ ಕಳಪೆ ಪ್ರದರ್ಶನ ನೀಡಿ ಹೊರಬಿದ್ದಿದ್ದರೂ, ಕ್ರೀಡಾಭಿಮಾನಿಗಳ ಪ್ರೀತಿ ಮಾತ್ರ ಕಳೆದುಕೊಂಡಿಲ್ಲ. ಈ ಬಾರಿಯ ಐಪಿಎಲ್ ಸೀಸನ್ ನಲ್ಲಿ ನಮಗೆ ಸಿಕ್ಕಿರುವ ಪ್ರೀತಿ ಹಾಗೂ ಬೆಂಬಲದಿಂದಾಗಿ ನಾವೂ ನಿಜಕ್ಕೂ ಆಭಾರಿಗಳಾಗಿದ್ದೇವೆ. ಮುಂದಿನ ಸೀಸನ್ ನಲ್ಲಿ ಮತ್ತಷ್ಟು ಬಲಿಷ್ಠರಾಗಿ ಮೈದಾನಕ್ಕೆ ಕಾಲಿಡುತ್ತೇವೆಂದು ಹೇಳಿದ್ದಾರೆ. 
2017ನೇ ಸಾಲಿನ ಐಪಿಎಲ್ ನಲ್ಲಿ ಆರ್ ಸಿಬಿ ಆಡಿರುವ 14 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳಲ್ಲಿ ಮಾತ್ರ ಗೆಲವು ಸಾಧಿಸಿದೆ. ಈ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಜೂನ್ 1 ರಿಂದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತಂಡ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗಿಯಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com