ಬಲಿಷ್ಠರಾಗಿ ಮತ್ತೆ ಮೈದಾನಕ್ಕೆ ಕಾಲಿಡುತ್ತೇವೆ: ವಿರಾಟ್ ಕೊಹ್ಲಿ ಭರವಸೆ

2017 ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳಪೆ ಪ್ರದರ್ಶನ ನೀಡಿ ಹೊರಬಿದ್ದಿರುವುದಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿಯವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದು...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on
ನವದೆಹಲಿ: 2017 ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳಪೆ ಪ್ರದರ್ಶನ ನೀಡಿ ಹೊರಬಿದ್ದಿರುವುದಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿಯವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಬಲಿಷ್ಠರಾಗಿ ಮತ್ತೆ ಮೈದಾನಕ್ಕೆ ಕಾಲಿಡುತ್ತೇವೆಂದು ಗುರುವಾರ ಭರವಸೆ ನೀಡಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೊಹ್ಲಿ, ಪ್ರಸಕ್ತ ಸಾರಿನ ಐಪಿಎಲ್ ಲೀಗ್'ನಲ್ಲಿ ಕಳಪೆ ಪ್ರದರ್ಶನ ನೀಡಿ ಹೊರಬಿದ್ದಿದ್ದರೂ, ಕ್ರೀಡಾಭಿಮಾನಿಗಳ ಪ್ರೀತಿ ಮಾತ್ರ ಕಳೆದುಕೊಂಡಿಲ್ಲ. ಈ ಬಾರಿಯ ಐಪಿಎಲ್ ಸೀಸನ್ ನಲ್ಲಿ ನಮಗೆ ಸಿಕ್ಕಿರುವ ಪ್ರೀತಿ ಹಾಗೂ ಬೆಂಬಲದಿಂದಾಗಿ ನಾವೂ ನಿಜಕ್ಕೂ ಆಭಾರಿಗಳಾಗಿದ್ದೇವೆ. ಮುಂದಿನ ಸೀಸನ್ ನಲ್ಲಿ ಮತ್ತಷ್ಟು ಬಲಿಷ್ಠರಾಗಿ ಮೈದಾನಕ್ಕೆ ಕಾಲಿಡುತ್ತೇವೆಂದು ಹೇಳಿದ್ದಾರೆ. 
2017ನೇ ಸಾಲಿನ ಐಪಿಎಲ್ ನಲ್ಲಿ ಆರ್ ಸಿಬಿ ಆಡಿರುವ 14 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳಲ್ಲಿ ಮಾತ್ರ ಗೆಲವು ಸಾಧಿಸಿದೆ. ಈ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಜೂನ್ 1 ರಿಂದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತಂಡ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗಿಯಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com