ಕನ್ನಡಿಗ ವೆಂಕಟೇಶ್ ಪ್ರಸಾದ್ ಬಿಸಿಸಿಐನ ಕ್ರಿಕೆಟ್ ಕಾರ್ಯಾಚರಣೆಗಳ ಪ್ರಧಾನ ವ್ಯವಸ್ಥಾಪಕ?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ಕ್ರಿಕೆಟ್ ಕಾರ್ಯಾಚರಣೆಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಟೀಂ ಇಂಡಿಯದ ಮಾಜಿ...
ವೆಂಕಟೇಶ್ ಪ್ರಸಾದ್
ವೆಂಕಟೇಶ್ ಪ್ರಸಾದ್
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ಕ್ರಿಕೆಟ್ ಕಾರ್ಯಾಚರಣೆಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಟೀಂ ಇಂಡಿಯದ ಮಾಜಿ ವೇಗಿ, ಕರ್ನಾಟಕದ ವೆಂಕಟೇಶ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆಯಿದೆ. 
ಪ್ರಸ್ತುತ ಟೀಂ ಇಂಡಿಯಾ ಕಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥರಾಗಿರುವ ಪ್ರಸಾದ್ ಅವರು ಈ ಹುದ್ದೆಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 
ಎಂವಿ ಶ್ರೀಧರ್ ಅವರ ನಿಧನದಿಂದ ಈ ಸ್ಥಾನ ತೆರವಾಗಿದ್ದು ಬಿಸಿಸಿಐ ಯೋಗ್ಯರ ಹುಡುಕಾಟದಲ್ಲಿ ತೊಡಗಿತ್ತು. ಟೀಂ ಇಂಡಿಯಾ ಪರವಾಗಿ ಆಡಿರುವ ವೆಂಕಟೇಶ್ ಪ್ರಸಾದ್ 33 ಟೆಸ್ಟ್ ಮತ್ತು 161 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com