ಕಳೆದ ಆಗಸ್ಟ್ ತಿಂಗಳಲ್ಲಿ ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ಕೇರಳ ಹೈಕೋರ್ಟ್ ನ ಏಕಸದಸ್ಯ ಪೀಠ ಆದೇಶಿಸಿತ್ತು. ಈ ಆದೇಶಕ್ಕೆ ಆಕ್ಷೇಪ ಸಲ್ಲಿಸಿ ಬಿಸಿಸಿಐ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ನ ವಿಭಾಗೀಯ ಪೀಠ ಬಿಸಿಸಿಐನ ಮನವಿಯನ್ನು ಎತ್ತಿಹಿಡಿದಿದ್ದು ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ ನೀಡಿದೆ.