2013ರಲ್ಲಿ ನಡೆದಿದ್ದ ಐಪಿಎಲ್ ಟೂರ್ನಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪಕ್ಕೆ ತುತ್ತಾಗಿದ್ದ ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ಆಜೀವ ನಿಷೇಧ ಹೇರಿತ್ತು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿ 2015ರಲ್ಲಿ ಪಾಟಿಯಾಲ ಕೋರ್ಟ್ ಶ್ರೀಶಾಂತ್, ಅಂಕಿತ್ ಚೌಹ್ವಾಣ್, ಅಜಿತ್ ಚಾಂಡೀಲಾ ಮೇಲಿನ ನಿಷೇಧವನ್ನು ತೆರವುಗೊಳಿಸಿತ್ತು. ಆದರೆ ಇತ್ತೀಚೆಗೆ ಕೇರಳ ಹೈಕೋರ್ಟ್ ಬಿಸಿಸಿಐ ನಿರ್ಧಾರವನ್ನು ಸಮರ್ಥಿಸಿಕೊಳ್ಳುವುದರೊಂದಿಗೆ ಮತ್ತೆ ದೇಶದ ಪರ ಕ್ರಿಕೆಟ್ ಆಡುವ ಶ್ರೀಶಾಂತ್ ಕನಸು ಭಗ್ನಗೊಂಡಿತ್ತು.