ಲಂಕಾ ವಿರುದ್ಧದ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದಿರುವ ಟೀಂ ಇಂಡಿಯಾ ತಂಡದ ಪ್ರದರ್ಶನವನ್ನು ಕೊಂಡಾಡಿರುವ ಗವಾಸ್ಕರ್, ಏಕದಿನ ಸರಣಿ ಆರಂಭದಿಂದಲೇ ಅಜಿಂಕ್ಯ ರಹಾನೆಗೆ ಸ್ಥಾನ ನೀಡದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಇನ್ನು ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ಟ್ಯಾಟೂ ಹಾಗೂ ವಿಚಿತ್ರ ಹೇರ್ಸ್ಟೈಲ್ ಇದ್ದರಷ್ಟೇ ಆದ್ಯತೆ ನೀಡಲಾಗುತ್ತದೆ ಎಂಬ ಆರೋಪ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.