ಆಸಿಸ್ ವಿರುದ್ಧ 4ನೇ ಪಂದ್ಯ; ದಾಖಲೆಯತ್ತ ಟೀಂ ಇಂಡಿಯಾ ಚಿತ್ತ

ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ..
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಬೆಂಗಳೂರು: ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಗೆಲುವು ಸಾಧಿಸುವ ಮೂಲಕ ಮತ್ತೊಂದು ಏಕದಿನ ಸರಣಿಯನ್ನು ವೈಟ್ ವಾಶ್ ಮಾಡುವ ಉತ್ಸಾವದಲ್ಲಿದೆ.
ಸರಣಿ ವೈಟ್ ವಾಶ್ ಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಪಡೆ ಭರ್ಜರಿ ತಾಲಿಮು ನಡೆಸಿದ್ದು, ಗೆಲುವಿನ ಲಯ ಮುಂದುವರೆಸುವ ಸಾಧ್ಯತೆ ಇದೆ. ಆಸಿಸ್ ವಿರುದ್ಧದ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಈಗ ನಾಲ್ಕನೇ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿ ಈಗಾಗಲೇ ಭಾರತದ ಪಾಲಾಗಿದೆ. ಸರಣಿ ಕೈವಶ ಮಾಡಿಕೊಂಡಿರುವ ವಿರಾಟ್ ಕೊಹ್ಲಿ ಪಡೆಯ ಮುಂದಿನ ಟಾರ್ಗೆಟ್ ಸರಣಿ ಕ್ಲೀನ್ ಸ್ವೀಪ್ ಮಾಡುವುದು. ಆದರೆ ಉದ್ಯಾನನಗರಿಯ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತದ ಗೆಲುವಿನ ಓಟಕ್ಕೆ ತಡೆ ಬೀಳುವ ಭೀತಿ ಎದುರಾಗಿದೆ. ಇಂಥ ಸವಾಲು ಎದುರಾಗಿರುವುದು ಸ್ಟೀವನ್ ಸ್ಮಿತ್ ಪಡೆಯಿಂದ ಅಲ್ಲ, ಮಳೆರಾಯ ಇಂಥದ್ದೊಂದು ಸಾಧ್ಯತೆಯನ್ನು ಹರಡಿದ್ದಾನೆ.
ಹವಾಮಾನ ಇಲಾಖೆ ವರದಿಯ ಪ್ರಕಾರ, ಗುರುವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ನಗರದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು 24ರಿಂದ 48 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com