ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಪಂದ್ಯ ಪುರಷ ಪ್ರಶಸ್ತಿ ಪಡೆದ ನಂತರ ಮಾತನಾಡಿದ ಎಬಿಡಿ ವಿಲಿಯರ್ಸ್ ಅವರು ಕಳೆದ ಎರಡು ಇನ್ನಿಂಗ್ಸ್ ನಲ್ಲಿ ನಾನು ವೈಫಲ್ಯ ಅನುಭವಿಸಿದ್ದೆ. ಆದರೆ ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅಭಿಮಾನಿಗಳು ಕಿಕ್ಕಿರಿದು ನೆರೆದಿದ್ದಾರೆ. ಜಗತ್ತಿನಲ್ಲಿ ಅತೀ ಹೆಚ್ಚು ಜನ ಸೇರುವ ಕ್ರೀಡಾಂಗಣ ಚಿನ್ನಸ್ವಾಮಿ ಎಂದು ಹೇಳಿದ್ದಾರೆ.