ಇದೇ ವೇಳೆ, ಭಾರತ ಕ್ರಿಕೆಟ್ ತಂಡದಲ್ಲಿ ಯೋಗ್ಯತೆಗೆ ತಕ್ಕಷ್ಟು ಮರ್ಯಾದೆ ಗಳಿಸದ ಕ್ರಿಕೆಟಿಗನೆಂದರೆ ಗೌತಮ್ ಗಂಭೀರ್ ಮಾತ್ರ ಎಂದೂ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. 2011, 2007ರ ವಿಶ್ವಕಪ್ನಲ್ಲಿ ತಂಡ ಗೆಲ್ಲಲು ಗಂಭೀರ್ ಕೊಡುಗೆ ನಿರ್ಣಾಯಕವಾಗಿತ್ತು. ಆದರೂ ಅವರು ಭಾರತ ತಂಡದಿಂದ ಹೊರ ಬೀಳಲು ಕಾರಣ ಅವರ ಸ್ವಭಾವ. ಅವರು ಭಾರತ ತಂಡದಿಂದ ಹೊರಬೀಳಲು ಮುಖ್ಯ ಕಾರಣ ಅವರಲ್ಲಿ ಹೆಚ್ಚುತ್ತಿದ್ದ ಸಿಟ್ಟು.