ಲಂಡನ್ : ನಾಳೆಯಿಂದ ಎರಡನೇ ಟೆಸ್ಟ್ : ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ತಾಲೀಮು

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿ ಸೋತು ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಅತಿಥೇಯರ ವಿರುದ್ಧ ಸೇಡು ತೀರಿಸಿಕೊಳ್ಳುವ ನಿಟ್ಟಿನಲ್ಲಿ ಟೀಂ ಇಂಡಿಯಾ ಭಾರೀ ಕಸರತ್ತು ನಡೆಸುತ್ತಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on

ಲಂಡನ್  : ಇಂಗ್ಲೆಂಡ್  ವಿರುದ್ಧದ ಮೊದಲ ಟೆಸ್ಟ್  ಕ್ರಿಕೆಟ್ ಪಂದ್ಯದಲ್ಲಿ  ಗೆಲುವಿನ ಅಂಚಿನಲ್ಲಿ ಸೋತು ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ ಆಟಗಾರರು ಎರಡನೇ ನಾಳೆಯಿಂದ ಆರಂಭವಾಗಲಿರುವ ದ್ವಿತೀಯ ಟೆಸ್ಟ್   ಪಂದ್ಯದಲ್ಲಿ ಅತಿಥೇಯರ ವಿರುದ್ಧ ಸೇಡು ತೀರಿಸಿಕೊಳ್ಳುವ ನಿಟ್ಟಿನಲ್ಲಿ  ಭಾರೀ ತಾಲೀಮು ನಡೆಸಿದ್ದಾರೆ.

ಲಾರ್ಡ್ ಮೈದಾನದಲ್ಲಿ ನಾಳೆಯಿಂದ  ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು,  ಟೀ ಇಂಡಿಯಾ ಆಟಗಾರರು  ಭರ್ಜರಿ ತಾಲೀಮು ನಡೆಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ ಆಟಗಾರರು ತಾಲೀಮಿ ನಡೆಸಿದ್ದು, ಇಂಗ್ಲೆಂಡ್ ಮಣಿಸುವ ತಂತ್ರ ರೂಪಿಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಬ್ಬರು ಸ್ಪಿನ್ನರ್ ಗಳು ಪೀಲ್ಡ್ ನಲ್ಲಿರುವುದು ನಿಶ್ಟಿತ ಆದರೆ, ಇದು ತಂಡದ ಸಮತೋಲನದ ಮೇಲೆ ಅವಲಂಬಿಸಿರುತ್ತದೆ ಎಂದು ಹೇಳಿದ್ದಾರೆ.  ಸ್ಪಿನ್ನರ್ ಗಳಿಂದ ಉತ್ತಮ ಆಟವನ್ನು ನಿರೀಕ್ಷಿಸುವುದಾಗಿ ಅವರು ತಿಳಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರ ತಾಲೀಮು ವೇಳೆಯಲ್ಲಿ ಮಾಸ್ಟರ್  ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್  ಪುತ್ರ ಅರ್ಜುನ್ ತೆಂಡೊಲ್ಕರ್ ಕೂಡಾ ಪಾಲ್ಗೊಂಡು  ಭಾರತೀಯ ಆಟಗಾರರಿಗೆ ನೆರವು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com